Featured

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ

ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ ‘ಸೆಲಿನಾ ಟ್ರಾವೆಲ್ಸ್’ ಬಸ್‌ಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕರಪತ್ರ ಸಂಪೂರ್ಣ ನಕಲಿ ಮತ್ತು ಸುಳ್ಳು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಲಾಗುತ್ತಿದ್ದ ಕರಪತ್ರದಲ್ಲಿ, ಸೆಲಿನಾ ಟ್ರಾವೆಲ್ಸ್ ಬಸ್‌ಗಳಲ್ಲಿ ಅಸಭ್ಯ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳನ್ನು ಮಾಡಲಾಗಿತ್ತು. ವಿಶೇಷವಾಗಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಈ ಬಸ್‌ಗಳಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿತ್ತು. ಅಲ್ಲದೆ, ಈ ಕುರಿತು ನಗರ ಪೊಲೀಸ್ ಠಾಣೆಯಿಂದಲೇ ಸೂಚನೆ ನೀಡಲಾಗಿದೆ ಎಂದು ತಪ್ಪಾಗಿ ಬಿಂಬಿಸಲಾಗಿತ್ತು. ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಉದ್ದೇಶದಿಂದ ತುರ್ತು ಪೊಲೀಸ್ ಸಹಾಯವಾಣಿ ಸಂಖ್ಯೆ ‘100’ನ್ನೂ ಕರಪತ್ರದಲ್ಲಿ ಬಳಸಲಾಗಿತ್ತು.

ಈ ಕರಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ವರದಿಗಾರರು ಡಿಕೆ ಸಿಟಿ ಅಂಡ್ ಡಿಸ್ಟ್ರಿಕ್ಟ್ ಪೊಲೀಸ್ & ಮೀಡಿಯಾ ವಾಟ್ಸಪ್ ಗುಂಪಿನಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆದಿದ್ದರು. ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್, ಪೊಲೀಸ್ ಇಲಾಖೆಯಿಂದ ಇಂತಹ ಯಾವುದೇ ಪ್ರಕಟಣೆ ಅಥವಾ ಸೂಚನೆ ನೀಡಲಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ನಡುವೆ, ಈ ನಕಲಿ ಕರಪತ್ರದ ಕುರಿತು ಸೆಲಿನಾ ಟ್ರಾವೆಲ್ಸ್ ಸಂಸ್ಥೆಯು ದೂರು ದಾಖಲಿಸಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರಲ್ಲಿ ಭೀತಿ ಮತ್ತು ಗೊಂದಲ ಸೃಷ್ಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಧಿಕೃತ ಮುದ್ರೆ ಅಥವಾ ಸಹಿ ಇಲ್ಲದೆ ಹರಿದಾಡುವ ಇಂತಹ ಎಚ್ಚರಿಕೆ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಅವುಗಳನ್ನು ಹಂಚುವ ಮೂಲಕ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.

Vishwa News 24

Recent Posts

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

3 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

3 hours ago