Featured

ಮಂಗಳೂರು:ಸುಳ್ಯ ರಂಗಮನೆ ಪ್ರಶಸ್ತಿ’ಗೆ ಆಯ್ಕೆಯಾದ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು -Vishwanews24

ಮಂಗಳೂರು:ಸುಳ್ಯ ರಂಗಮನೆ ಪ್ರಶಸ್ತಿ’ಗೆ ಆಯ್ಕೆಯಾದ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು -Vishwanews24

ಮಂಗಳೂರು: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಸಂಸ್ಥೆಯು ಪ್ರತಿವರ್ಷ ಕೂಡ ಮಾಡುವ 2021 ನೇ ಸಾಲಿನ ‘ಸುಳ್ಯ ರಂಗಮನೆ ಪ್ರಶಸ್ತಿ’ಗೆ ಹಿರಿಯ ರಂಗಭೂಮಿ ಮತ್ತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಆಯ್ಕೆ ಮಾಡಲಾಗಿದೆ.

40 ವರ್ಷಗಳಿಂದ ರಂಗಭೂಮಿ ಮತ್ತು ಚಲನ ಚಿತ್ರರಂಗದಲ್ಲಿ ನಟ, ನಿರ್ದೇಶಕನಾಗಿ ಮಿಂಚಿದ ಚಂದ್ರು ಅವರು ತನ್ನದೇ ಆದ ಅಭಿನಯ ಶೈಲಿ, ಮಾತಗಾರಿಕೆಯಿಂದ ಪ್ರಸಿದ್ಧರಾದವರು. ಹಾಸ್ಯ ಮತ್ತು ಖಳನಾಯಕನಾಗಿ ಮಿಂಚಿದ ಚಂದ್ರುರವರ ಮುಖ್ಯಮಂತ್ರಿ ನಾಟಕ ದೇಶ-ವಿದೇಶಗಳಲ್ಲಿ ಪ್ರದರ್ಶನಗೊಂಡ ಜನಪ್ರಿಯ ರಾಜಕೀಯ ನಾಟಕವಾಗಿದೆ.

ಪುತ್ತೂರು: ಸಾಲ ವಸೂಲಿಗಾಗಿ ಮನೆ ಮುಟ್ಟುಗೋಲು ; ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಗೆ ಶರಣು -Vishwanews24

ಗೌರಿಬಿದನೂರಿನಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಕಾಲದಲ್ಲಿ ಕನ್ನಡ ನಾಡು, ನುಡಿ, ಗಡಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಅನುಷ್ಠಾನಗೊಳಿಸಲು ಶ್ರಮಿಸಿದ್ದಾರೆ.

ಇಂಗ್ಲೆಂಡ್, ಮ್ಯಾಂಚಿಸ್ಟೇರ್‍ನಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ, ಪ್ಯಾರಿಸ್‍ನಲ್ಲಿ ನಡೆದ ವಿಶ್ವಶಾಂತಿ ಸಮ್ಮೇಳನ, ಅಮೇರಿಕದ ಅಕ್ಕ ಸಮ್ಮೇಳನ ಮುಂತಾದೆಡೆ ಕನ್ನಡದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ. ಇವರ ರಂಗಭೂಮಿ ಮತ್ತು ಕನ್ನಡ ಸೇವೆಯನ್ನು ಗುರುತಿಸಿ ಗುಲ್ಬರ್ಗ ವಿಶ್ವವಿದ್ಯಾಲಯವು ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಫೆ. 22 ರಿಂದ 27ರ ವರೆಗೆ ಹೆಜಮಾಡಿಯಿಂದ – ಶಿರೂರಿನ ವರೆಗೆ 108 ಕಿಮಿಗಳ ‘ಜನಧ್ವನಿ’ ಪಾದಯಾತ್ರೆ : ಅಶೋಕ್ ಕುಮಾರ್ ಕೊಡವೂರು -Vishwanews24

ಚಂದ್ರು ಅಭಿನಯಿಸಿದ ನಾಟಕಗಳು ಸಾವಿರಾರು ದಿನ ಪ್ರದರ್ಶನ ಕಂಡಿರುತ್ತದೆ. ಸುಮಾರು ಐನೂರಕ್ಕೂ ಅಧಿಕ ಚಲನಚಿತ್ರದಲ್ಲಿ ಅಭಿನಯಿಸಿ, ಈಗಲೂ ನಾಟಕಗಳಲ್ಲಿ ಅಭಿನಯಿಸುತ್ತಾ ಕೋಟ್ಯಂತರ ಕನ್ನಡಿಗರ ಮನಗೆದ್ದ ಚಂದ್ರು ಅವರನ್ನು ಈ ವರ್ಷದ ರಂಗಮನೆ ಪ್ರಶಸ್ತಿಗೆ ಸಮಿತಿಯು ಆಯ್ಕೆ ಮಾಡಿದೆ.

ಪ್ರಶಸ್ತಿಯು 10 ಸಾವಿರ ನಗದು ಸೇರಿದಂತೆ ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿರುತ್ತದೆ. ಮಾರ್ಚ್ 14 ರಂದು 20ನೇ ವರ್ಷದ ರಂಗಸಂಭ್ರಮದ ಸಂದರ್ಭದಲ್ಲಿ ರಂಗಮನೆಯಲ್ಲಿ ನಡೆಯುವ 8 ದಿನಗಳ ಬಹುಭಾಷಾ ನಾಟಕೋತ್ಸವದ ಸಮಾರೋಪದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಂಗಮನೆ ಅಧ್ಯಕ್ಷ ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಕೆ : ಮಹಿಳೆಯರತ್ತ ಕನಿಕರ ತೋರದ ಹಗಲು ದರೋಡೆಯ ಸರಕಾರ : ರಮಾನಾಥ‌ ರೈ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

8 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

8 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

8 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

9 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

9 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

9 hours ago