Featured

ಮಂಗಳೂರು;ಸ್ಕೂಟಿಗೆ ಬಿಎಂಡಬ್ಲ್ಯು ಕಾರು ಢಿಕ್ಕಿ: ಗಾಯಾಳು ಮಹಿಳೆಯ ಬ್ರೈನ್ ಡೆಡ್ – ಅಂಗಾಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ – Vishwanews24

ಏ.9 ರ ಶನಿವಾರ ಬಲ್ಲಾಳ್‌ ಭಾಗ್ ಜಂಕ್ಷನ್‌ನಲ್ಲಿ  ಅಪಘಾತ ..

ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ್ದ ಸ್ಕೂಟರ್ ಸವಾರೆ ಪ್ರೀತಿ ಮನೋಜ್

ಮಂಗಳೂರು: ಅತಿವೇಗದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕದ ಮೇಲೆ ಹಾರಿ, ರಸ್ತೆಯ ಇನ್ನೊಂದು ಭಾಗದಲ್ಲಿನ ಸ್ಕೂಟಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಪ್ರೀತಿ ಮನೋಜ್ ಅವರ ಮೆದುಳು ನಿಷ್ಕ್ರೀಯಗೊಂಡಿದ್ದು, ಈ ಹಿನ್ನಲೆಯಲ್ಲಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡವ ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ ಅವರು ಎ. 9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಬಿಎಂಡಬ್ಲ್ಯು ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು‌.

ಏ.9 ರ ಶನಿವಾರದಂದು ಮಧ್ಯಾಹ್ನ 1.20ರ ಸುಮಾರಿಗೆ ಬಲ್ಲಾಳ್‌ ಭಾಗ್ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕನ ವೇಗದ ಚಾಲನೆಗೆ ಕಾರು ಡಿವೈಡರ್ ಮೇಲಿಂದ ಹಾರಿ ಸ್ಕೂಟಿಯಲ್ಲಿ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಅತಿವೇಗದ ಚಾಲನೆಯಿಂದ ಬಿಎಂಡಬ್ಲ್ಯು ಕಾರು ರಸ್ತೆ ವಿಭಜಕ ದಾಟಿ ಮತ್ತೊಂದು ಬದಿಯಲ್ಲಿ ಸಂಚರಿಸುತ್ತಿದ್ದ ಸ್ಕೂಟರ್ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು.ಅಪಘಾತದದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರೆ 47ರ ಹರೆಯ ಪ್ರೀತಿ ಮನೋಜ್ ಎಂಬುವವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಮೆದುಳು ನಿಷ್ಕ್ರೀಯಗೊಂಡ ಹಿನ್ನಲೆಯಲ್ಲಿ ಪ್ರೀತಿ ಅವರ ಅಂಗಾಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago