ಮಂಗಳೂರು, : ಕರ್ನಾಟಕದ ಮಂಗಳೂರು ಸೇರಿ ದೇಶದ ಮೂರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗೆ ಗುತ್ತಿಗೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೇರಿದ ಮಂಗಳೂರು, ಅಹಮದಾಬಾದ್ ಹಾಗೂ ಲಖನೌ ವಿಮಾನ ನಿಲ್ದಾಣಗಳನ್ನು ಖಾಸಗಿ -ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ವಹಣೆಗಾಗಿ ಲೀಸ್ ಗೆ ನೀಡುವ ಪ್ರಸ್ತಾವಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಷಾರಂಭದಲ್ಲಿ ಈ ಮೂರೂ ವಿಮಾನ ನಿಲ್ದಾಣಗಳನ್ನು 50 ವರ್ಷ ನಿರ್ವಹಣೆ ಮಾಡುವ ಗುತ್ತಿಗೆಯನ್ನು ಅದಾನಿ ಕಂಪನಿ ಪಡೆದುಕೊಂಡಿತ್ತು. ಇದಲ್ಲದೆ ಜೈಪುರ, ಗುವಾಹಟಿ, ತಿರುವನಂತಪುರ ವಿಮಾನ ನಿಲ್ದಾಣಗಳ ಗುತ್ತಿಗೆಯನ್ನೂ ಗಳಿಸಿತ್ತು. ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು.
ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ (ಪರ್ ಪ್ಯಾಸೆಂಜರ್ ಫೀ) ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು. ಅದಾನಿ ಸಮೂಹ ಪ್ರತಿ ಪ್ರಯಾಣಿಕನಿಗೆ 115 ರೂ. ನೀಡುವುದಾಗಿ ಪರ್ ಪ್ಯಾಸೆಂಜರ್ ಫೀ ನೀಡಿದ್ದರೆ ಜಿಎಂಆರ್ 18 ರೂ. ಹಾಗೂ ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ 45 ರೂ. ಪ್ರಸ್ತಾವನೆ ಸಲ್ಲಿತ್ತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…