ಮಂಗಳೂರು, : ಕರ್ನಾಟಕದ ಮಂಗಳೂರು ಸೇರಿ ದೇಶದ ಮೂರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗೆ ಗುತ್ತಿಗೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೇರಿದ ಮಂಗಳೂರು, ಅಹಮದಾಬಾದ್ ಹಾಗೂ ಲಖನೌ ವಿಮಾನ ನಿಲ್ದಾಣಗಳನ್ನು ಖಾಸಗಿ -ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ವಹಣೆಗಾಗಿ ಲೀಸ್ ಗೆ ನೀಡುವ ಪ್ರಸ್ತಾವಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಷಾರಂಭದಲ್ಲಿ ಈ ಮೂರೂ ವಿಮಾನ ನಿಲ್ದಾಣಗಳನ್ನು 50 ವರ್ಷ ನಿರ್ವಹಣೆ ಮಾಡುವ ಗುತ್ತಿಗೆಯನ್ನು ಅದಾನಿ ಕಂಪನಿ ಪಡೆದುಕೊಂಡಿತ್ತು. ಇದಲ್ಲದೆ ಜೈಪುರ, ಗುವಾಹಟಿ, ತಿರುವನಂತಪುರ ವಿಮಾನ ನಿಲ್ದಾಣಗಳ ಗುತ್ತಿಗೆಯನ್ನೂ ಗಳಿಸಿತ್ತು. ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು.
ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ (ಪರ್ ಪ್ಯಾಸೆಂಜರ್ ಫೀ) ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು. ಅದಾನಿ ಸಮೂಹ ಪ್ರತಿ ಪ್ರಯಾಣಿಕನಿಗೆ 115 ರೂ. ನೀಡುವುದಾಗಿ ಪರ್ ಪ್ಯಾಸೆಂಜರ್ ಫೀ ನೀಡಿದ್ದರೆ ಜಿಎಂಆರ್ 18 ರೂ. ಹಾಗೂ ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ 45 ರೂ. ಪ್ರಸ್ತಾವನೆ ಸಲ್ಲಿತ್ತು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…