ಮಂಗಳೂರು, : ಕರ್ನಾಟಕದ ಮಂಗಳೂರು ಸೇರಿ ದೇಶದ ಮೂರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗೆ ಗುತ್ತಿಗೆ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸೇರಿದ ಮಂಗಳೂರು, ಅಹಮದಾಬಾದ್ ಹಾಗೂ ಲಖನೌ ವಿಮಾನ ನಿಲ್ದಾಣಗಳನ್ನು ಖಾಸಗಿ -ಸಾರ್ವಜನಿಕ ಸಹಭಾಗಿತ್ವದಲ್ಲಿ ನಿರ್ವಹಣೆಗಾಗಿ ಲೀಸ್ ಗೆ ನೀಡುವ ಪ್ರಸ್ತಾವಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರ್ಷಾರಂಭದಲ್ಲಿ ಈ ಮೂರೂ ವಿಮಾನ ನಿಲ್ದಾಣಗಳನ್ನು 50 ವರ್ಷ ನಿರ್ವಹಣೆ ಮಾಡುವ ಗುತ್ತಿಗೆಯನ್ನು ಅದಾನಿ ಕಂಪನಿ ಪಡೆದುಕೊಂಡಿತ್ತು. ಇದಲ್ಲದೆ ಜೈಪುರ, ಗುವಾಹಟಿ, ತಿರುವನಂತಪುರ ವಿಮಾನ ನಿಲ್ದಾಣಗಳ ಗುತ್ತಿಗೆಯನ್ನೂ ಗಳಿಸಿತ್ತು. ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು.
ಪ್ರತಿ ಪ್ರಯಾಣಿಕನಿಗೆ ವಿಧಿಸಲಾಗುವ ಕನಿಷ್ಠ ಶುಲ್ಕ (ಪರ್ ಪ್ಯಾಸೆಂಜರ್ ಫೀ) ಆಧರಿಸಿ ಬಿಡ್ಡರ್ಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಆಯ್ಕೆ ಮಾಡಿತ್ತು. ಅದಾನಿ ಸಮೂಹ ಪ್ರತಿ ಪ್ರಯಾಣಿಕನಿಗೆ 115 ರೂ. ನೀಡುವುದಾಗಿ ಪರ್ ಪ್ಯಾಸೆಂಜರ್ ಫೀ ನೀಡಿದ್ದರೆ ಜಿಎಂಆರ್ 18 ರೂ. ಹಾಗೂ ಕೊಚ್ಚಿನ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ 45 ರೂ. ಪ್ರಸ್ತಾವನೆ ಸಲ್ಲಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…