ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಈ ಪ್ರಸ್ತಾಪವನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಲಾಗಿದ್ದು, ಸರಕಾರ ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರಾವಳಿಯಲ್ಲಿ ಕೋಟಿ-ಚೆನ್ನಯ ಹೆಸರಿಗೆ ಎಲ್ಲಾ ಸಮುದಾಯಗಳ ಒಲವೂ ಇದೆ. ಈ ಕಾರಣಕ್ಕೆ ಸರಕಾರ ಕೇಂದ್ರಕ್ಕೆ ಈ ಹೆಸರೊಂದನ್ನೇ ಕಳುಹಿಸುವುದು ಸೂಕ್ತ ಎಂದು ಸಲಹೆಯನ್ನೂ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯೂ ಹರೀಶ್ ಕುಮಾರ್ ಆಗಿದ್ದಾರೆ ಎನ್ನುವ ಮಾತುಗಳೂ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…