Featured

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಶಾಸಕ ಹರೀಶ್ ಕುಮಾರ್ ಒತ್ತಾಯ – vishwanews24

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರು ಇಡುವಂತೆ ಶಾಸಕ ಹರೀಶ್ ಕುಮಾರ್ ಒತ್ತಾಯ

ಬೆಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ-ಚೆನ್ನಯರ ಹೆಸರಿನ ವಿಚಾರದಲ್ಲಿ ಮತ್ತೆ ಒತ್ತಾಯಗಳು ಕೇಳಿಬರಲಾರಂಭಿಸಿದೆ. ರಾಜ್ಯ ವಿಧಾನ ಪರಿಷತ್ ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

ಈ ಹಿಂದೆ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕೂಡಾ ಇದೇ ಒತ್ತಾಯವನ್ನು ಮಾಡಿದ್ದಾರೆ. ಹರೀಶ್ ಕುಮಾರ್ ಈ ವಿಚಾರವಾಗಿ ಸರಕಾರವನ್ನು ಬಲವಾಗಿ ಒತ್ತಾಯಿಸಿದ್ದು,ಈ ಸಂಬಂಧ ಹೋರಾಟಕ್ಕೂ ಸಿದ್ಧವಾಗಿದ್ದೇನೆ ಎಂದು ಪಟ್ಟು ಹಿಡಿದಿದ್ದಾರೆ. ಈಗಾಗಲೇ ಈ ಪ್ರಸ್ತಾಪವನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸಲಾಗಿದ್ದು, ಸರಕಾರ ಈ ಪ್ರಸ್ತಾವನೆಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕರಾವಳಿಯಲ್ಲಿ ಕೋಟಿ-ಚೆನ್ನಯ ಹೆಸರಿಗೆ ಎಲ್ಲಾ ಸಮುದಾಯಗಳ ಒಲವೂ ಇದೆ‌. ಈ ಕಾರಣಕ್ಕೆ ಸರಕಾರ ಕೇಂದ್ರಕ್ಕೆ ಈ ಹೆಸರೊಂದನ್ನೇ ಕಳುಹಿಸುವುದು ಸೂಕ್ತ ಎಂದು ಸಲಹೆಯನ್ನೂ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿಯೂ ಹರೀಶ್ ಕುಮಾರ್ ಆಗಿದ್ದಾರೆ ಎನ್ನುವ ಮಾತುಗಳೂ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago