Featured

ಮಂಗಳೂರು : ಅಕ್ರಮ ಕಸಾಯಿಖಾನೆ ಆರೋಪ – ಸ್ಥಳಕ್ಕೆ ಮೇಯರ್  ದಿಢೀರ್ ಭೇಟಿ , ಪರಿಶೀಲನೆ – vishwanews24

ಮಂಗಳೂರು : ಅಕ್ರಮ ಕಸಾಯಿಖಾನೆ ಆರೋಪ – ಸ್ಥಳಕ್ಕೆ ಮೇಯರ್  ದಿಢೀರ್ ಭೇಟಿ

ಮಂಗಳೂರು: ನಗರದ ಕುದ್ರೋಳಿಯಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಯುತ್ತಿರುವ ಆರೋಪದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕುದ್ರೋಳಿಯಲ್ಲಿ ಕಾರ್ಯಾಚರಿಸುತ್ತಿದ್ದ ಈ ಕಸಾಯಿಖಾನೆಯನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ಸೂಚನೆ ಮೇರೆಗೆ ಕೆಲವು ವರ್ಷಗಳ ಹಿಂದೆಯೇ ಸ್ಥಗಿತಗೊಳಿಸಲಾಗಿತ್ತು. ಆದರೆ ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮೇಯರ್ ಅವರಿಗೆ ಕುದ್ರೋಳಿಯ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಪ್ರಾಣಿವಧೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇಯರ್ ಅವರು ಕೆಲ ಮನಪಾ ಸದಸ್ಯರು ಹಾಗೂ ಮನಪಾ ಅಧಿಕಾರಿಗಳೊಂದಿಗೆ ದಿಢೀರ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕಸಾಯಿಖಾನೆಯಲ್ಲಿ ಯಾವುದೇ ಪ್ರಾಣಿ ವಧೆ ನಡೆಯುತ್ತಿರಲಿಲ್ಲ. ಆದರೆ ಸಮೀಪದಲ್ಲಿ ವ್ಯಕ್ತಿಯೊಬ್ಬರು ಶೆಡ್‌ವೊಂದರಲ್ಲಿ ಅಕ್ರಮವಾಗಿ ಪ್ರಾಣಿ ವಧೆ ಮಾಡುತ್ತಿರುವುದು ಕಂಡುಬಂದಿದೆ. ಅಲ್ಲಿ ಪ್ರಾಣಿಗಳ ತಲೆ, ಕೊಂಬುಗಳು ಪತ್ತೆಯಾಗಿವೆ ಎಂದು ಮೇಯರ್ ಮಾಹಿತಿ ನೀಡಿದ್ದಾರೆ. ಈ ಕಸಾಯಿಖಾನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗುವುದು. ಅಲ್ಲದೆ ಈ ಅಕ್ರಮ ಕಟ್ಟಡವನ್ನು ಧ್ವಂಸಗೊಳಿಸಲಾಗುವುದು ಎಂದು ಮೇಯರ್ ತಿಳಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago