Featured

ಮಂಗಳೂರು : ಅಕ್ರಮ ದನ ಸಾಗಾಟದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಕುಖ್ಯಾತ ರೌಡಿಗಳ ಅರೆಸ್ಟ್ – Vishwanews24

ಮಂಗಳೂರು : ಅಕ್ರಮ ದನ ಸಾಗಾಟದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಕುಖ್ಯಾತ ರೌಡಿಗಳ ಅರೆಸ್ಟ್

ಮಂಗಳೂರು : ಮಂಗಳೂರಿನ ಅಡ್ಯಾರ್ ಪರಿಸರದಲ್ಲಿ ಅಕ್ರಮ ದನ ಸಾಗಾಟ ಮಾಡುತ್ತಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಬಂಧಿತರನ್ನು ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ @ ಗರುಡ ತಸ್ಲೀಮ್(34), ಹೈದರಾಲಿ @ ಹೈದು(26) ಎಂದು ಗುರುತಿಸಲಾಗಿದೆ.

ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳನ್ನು ಬಂಧಿಸಿ ಅವರಿಂದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆ ನಡೆದಿತ್ತು. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಆನಂತರ, ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿ ಹೊಂಚು ಹಾಕುತ್ತಿದ್ದ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತ ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೇ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದ. 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಗೊಂಡಿದ್ದ. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತ ಈ ಹಿಂದೆ ಮೂಡಬಿದ್ರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago