ಮಂಗಳೂರು : ತಲಪಾಡಿ ಸಾಂತ್ಯ ಬಳಿ ಅಬಕಾರಿ ಪೊಲೀಸರು ದಾಳಿ ನಡೆಸಿ ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆ ಬಯಲು ಮಾಡಿದ್ದಾರೆ. ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ಸ್ಪಿರಿಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು 2240 ಲೀ ಮದ್ಯ ಸಾರ, 222 ಲೀ ನಕಲಿ ಬ್ರಾಂಡಿ ಸಹಿತ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಮೂವರನ್ನು ವಶಕ್ಕೆ ಪಡೆದಿದ್ದು ಓರ್ವ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೇರಳ ರಾಜ್ಯಕ್ಕೆ ಸಾಗಾಟ ಮಾಡಲು ಕೇರಳಗಡಿ ಭಾಗ ಕಿನ್ಯಾ ಗ್ರಾಮದ ಸಾಂತ್ಯ ಬಳಿ ಸ್ಪಿರಿಟ್ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕರ ನೇತೃತ್ವದಲ್ಲಿ 25ಕ್ಕೂ ಅಧಿಕ ಅಧಿಕಾರಿಗಳು ಗಡಿಭಾಗ ತಲಪಾಡಿಯಲ್ಲಿ ಅಕ್ರಮವಾಗಿ ಸ್ಪಿರಿಟ್ ಮತ್ತು ನಕಲಿ ಮದ್ಯ ದಾಸ್ತಾನಿನ ಮೇಲೆ ದಾಳಿ ಮಾಡಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ. ತಲಪಾಡಿ ನಿವಾಸಿ ಸತೀಶ್, ಕುಂಜತ್ತೂರು ನಿವಾಸಿಗಳಾದ ನೌಷಾದ್, ಅನ್ಸೀಫ್ ವಶಕ್ಕೆ ಪಡೆಯಲಾಗಿದೆ.
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…