ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…