ಮಂಗಳೂರು: ನಾನು ಧಾರ್ಮಿಕ ನಿಂದನೆ ಮಾಡಿಲ್ಲ. ಆದ್ರೇ ಅಜಾನ್ ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಎಂಬುದಾಗಿ ಹೇಳಿದ್ದೇನೆ. ಅಲ್ಲಾನಿಗೆ ಕಿವಿ ಇದೆ ಇಲ್ವ ಅಂತ ನಾನು ಹೇಳಿದ್ದು ನಿಜ ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಅಲ್ಲಾನಿಗೆ ಕಿವಿ ಇದೆ ಅಲ್ವ ಅಂತ ನಾನು ಹೇಳಿದ್ದು ನಿಜ. ಅಜಾನ್ ನಿಂದ ಮಕ್ಕಳ ಪರೀಕ್ಷೆ ಮೇಲೆ ಎಫೆಕ್ಟ್ ಆಗುತ್ತದೆ ಅಂತ ಹೇಳಿದ್ದೇನೆ. ಇದು ಧಾರ್ಮಿಕ ನಿಂದನೆ ಮಾಡಿದಂತೆ ಆಗಲ್ಲ ಎಂದು ಹೇಳಿದ್ದಾರೆ.
ಮುಸ್ಲಿಮರ ಅಝಾನ್ ಕುರಿತು ಹೇಳಿಕೆ ವಿವಾದವಲ್ಲ, ನಾನು ಧಾರ್ಮಿಕ ನಿಂದನೆ ಮಾಡಿಲ್ಲ, ಅಲ್ಲಾಹುವಿನ ಬಗ್ಗೆ ಅವಹೇಳನ ಮಾಡಿಲ್ಲ. ಆದರೆ ಅಝಾನ್ ವಿಚಾರದಲ್ಲಿ ಯಾರಾದರೂ ಮಾತನಾಡಲೇಬೇಕಿತ್ತು, ಮಾತನಾಡಿದ್ದೇನೆ. ಅದು ಶ್ರೀಸಾಮಾನ್ಯನ ಅನಿಸಿಕೆ, ನಾನು ಅದನ್ನು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.
ಚುನಾವಣೆ ಸಂದರ್ಭದಲ್ಲಿ ಮಾತನಾಡಿ ವಿವಾದ ಮಾಡುವ ವಿಚಾರ ಇಲ್ಲಿ ಬರುವುದೇ ಇಲ್ಲ ಎಂದು ಸ್ಪಷ್ಟನೆ ಕೊಟ್ಟ ಅವರು, ಗೋಹತ್ಯೆ ತಡೆ ಕಾಯ್ದೆ, ಮತಾಂತರ ತಡೆ ಕಾಯ್ದೆ, ತ್ರಿವಳಿ ತಲಾಖ್ ರದ್ದು ಇತ್ಯಾದಿಗಳೆಲ್ಲವೂ ನಮ್ಮ ಸರಕಾರದ ಸಾಧನೆಗಳು ಎಂದರು.
ತುರ್ತು ಪರಿಸ್ಥಿತಿಯಲ್ಲಿ ನಾವು ಜೈಲಿಗೆ ಹೋಗಿದ್ದೆವು. ಕೇವಲ ರಾಜಕಾರಣ ಮಾಡಲ್ಲ. ಹಾಗಂತ ನಾನು ಸನ್ಯಾಸಿಯಲ್ಲ. ನಾನು ಶಾಸಕನಾಗಿ ಮುಸ್ಲೀಮರಿಗೆ ಸಹಾಯ ಮಾಡುತ್ತಿದ್ದೇನೆ. ನನ್ನ ಮನೆಗೆ ಮುಸ್ಲೀಂ ಸಮುದಾಯದವರು ಬರುತ್ತಾರೆ. ಕಾಂಗ್ರೆಸ್ ಪಕ್ಷ ನಂಬಿದ್ರೇ ಮುಸ್ಲೀಮರಿಗೆ ಏನೂ ಪ್ರಯೋಜನವಿಲ್ಲ ಎಂಬುದಾಗಿ ತಿಳಿಸಿದೆ.
ಅಂದಹಾಗೇ ನಿನ್ನೆ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮಾತನಾಡುತ್ತಿದ್ದ ಸಂದರ್ಭದಲ್ಲಿ ಆಜಾನ್ ಕೂಗಲಾಗಿತ್ತು. ಈ ವೇಳೆ ಮೈಕ್ ಹಾಕಿಕೊಂಡು ಕೂಗಿದ್ರೇ ಮಾತ್ರನ ಅಲ್ಲಾನಿಗೆ ಕಿವಿ ಕೇಳೋದು ಎಂದಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…