Featured

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ : ರಮಾನಾಥ ರೈ ಆರೋಪ 

ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದು ಈ ಮೂಲಕ ಸಾಬೀತು : ಐವನ್ ಡಿಸೋಜ

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ಮಂಗಳೂರಿನ ಕದ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಖಾಲಿ ಗ್ಯಾಸ್ ಸಿಲಿಂಡರ್ಗೆ ಹೂಮಾಲೆ ಹಾಕಿ ಅದನ್ನು ಚಟ್ಟದ ಮೇಲೆ ಕಟ್ಟಿ ಕಾಂಗ್ರೆಸ್ ಕಾರ್ಯ ಕರ್ತರು ಹೊತ್ತುಕೊಂಡು ಕದ್ರಿ ಸರ್ಕಲ್ ಬಳಿ ಅಣಕು ಶವಯಾತ್ರೆ ನಡೆಸಿ ಸಾರ್ವಜನಿಕರ ಗಮನ ಸೆಳೆದರು. ಗ್ಯಾಸ್ ಸ್ಟೌ ಮತ್ತು ಖಾಲಿ ಪಾತ್ರೆಯನ್ನೂ ಪ್ರತಿಭಟನಾಕಾರರು ಪ್ರದರ್ಶಿಸಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ ಕೇಂದ್ರ ಸರಕಾರದ ವೈಫಲ್ಯದಿಂದ ದೇಶದಲ್ಲಿ ಅಡುಗೆ ಅನಿಲ ಸರಿಯಾಗಿ ಪೂರೈಕೆಯಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾ ಗುತ್ತಿದೆ. ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಅಡುಗೆ ಅನಿಲದ ಬೆಲೆಯು ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ.ಗೆ ಏರಿಕೆಯಾಗಿದೆ. ಪರಿಣಾಮ ಹೊಟೇಲ್ಗಳಲ್ಲಿ ತಿಂಡಿ ತಿನಿಸು, ಊಟದ ದರದಲ್ಲೂ ವಿಪರೀತ ಏರಿಕೆಯಾಗಿದೆ. ಆಟೊ ರಿಕ್ಷಾಗಳಿಗೆ ಎಲ್ಪಿಜಿ ಸಿಗದೆ ಚಾಲಕರು ಪರದಾಡುವಂತಾಗಿದೆ. ಇದಕ್ಕೆ ಬಿಜೆಪಿ, ಕೇಂದ್ರ ಸರಕಾರವೇ ಕಾರಣವಾಗಿದೆ.

ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದನ್ನು ಈ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಆರೋಪಿಸಿದರು. ಅಧ್ಯಕ್ಷತೆ ವಹಿಸಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಮಾತನಾಡಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದರು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಬಶೀರ್, ಸುನೀತ್ ದೇಸಾಯಿ, ಮುಖಂಡರಾದ ಫಾರೂಕ್ ಪೆರ್ನೆ, ಆಸೀಫ್ ಬಜಾಲ್, ಸಮರ್ಥ್ ಭಟ್, ಪೃಥ್ವಿರಾಜ್, ಮೆಲ್ವಿನ್, ಚೇತನ್, ಮಹೇಶ್, ಪ್ರಜ್ವಲ್ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago