ಮಂಗಳೂರು: ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈಯ್ಯುವವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಾನೂನನ್ನು ಸರಕಾರ ಜಾರಿಗೊಳಿಸಲಿ. ನಾಲ್ಕು ಜನರಿಗೆ ಈ ರೀತಿಯ ಶಿಕ್ಷೆಯಾದಲ್ಲಿ ತನ್ನಷ್ಟಕ್ಕೆ ಇಂತಹ ಪ್ರಕರಣಗಳು ನಿಲ್ಲುತ್ತದೆ ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹೇಳಿದರು.
ನಗರಸ ಮಲ್ಲಿಕಟ್ಟೆಯಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರು ಸುರತ್ಕಲ್ ನ ಬಂಟ ಸಮುದಾಯದ ಯುವತಿಯೋರ್ವಳಿಗೆ ಮುಸ್ಲಿಂ ಯುವಕನೊಂದಿಗೆ ಸಂಬಂಧ ಇದೆ. ಆಕೆ 30 ವರ್ಷವಾದರೂ ಇನ್ನೂ ಮದುವೆಯಾಗಿಲ್ಲ ಎಂದಿದ್ದಾರೆ. ಹಾಗಾದರೆ ಚೈತ್ರಾ ಅವರದ್ದೇ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು 55 ವರ್ಷವಾದರೂ ಯಾಕೆ ಮದುವೆಯಾಗಿಲ್ಲವೆಂದು ತಾವು ಪ್ರಶ್ನಿಸಿಲ್ಲ. ಸಾಧ್ಯವಾದರೆ ಚೈತ್ರ ಕುಂದಾಪುರ ಅವರು ಬಂಟ ಸಮುದಾಯದ ಯುವತಿಯನ್ನು ಪ್ರೀತಿಸುವ ಮುಸ್ಲಿಂ ಯುವಕನನ್ನು ತೋರಿಸಿಕೊಡಲಿ. ಅದು ಸಾಧ್ಯವಾಗದಿದ್ದಲ್ಲಿ ಸಾರ್ವಜನಿಕವಾಗಿ ಅವರು ದ.ಕ.ಜಿಲ್ಲೆಯ ಹೆಣ್ಣು ಮಕ್ಕಳ ಕ್ಷಮೆ ಯಾಚಿಸಲಿ. ಜೊತೆಗೆ ಚೈತ್ರಾ ಅವರು ಯಾರನ್ನು, ಯಾವಾಗ, ಎಷ್ಟು ವರ್ಷದೊಳಗೆ ಮದುವೆಯಾಗುತ್ತಾರೆಂದು ತಿಳಿಸಲಿ ಎಂದು ಸವಾಲೆಸೆದರು.
ಸೀತಾ, ಸಾವಿತ್ರಿ, ಗೀತಾ ಗಾಯತ್ರಿರಿದ್ದ ನಮ್ಮ ದೇಶದಲ್ಲಿ ಲಂಕಿಣಿ, ಶೂರ್ಪನಖಿಯರೂ ಇದ್ದರು. ನೀವು ಯಾವ ಪಂಗಡಕ್ಕೆ ಸೇರಿದವರೆಂದು ಮೊದಲು ತಿಳಿಸಿ. ಜೊತೆಗೆ ತಮಗೆ ಈ ರೀತಿಯ ಹಿಂದೂ ಪಾಠ ಯಾರು ಮಾಡಿದ್ದು ಎಂದೂ ತಿಳಿಸಿ. ಚೈತ್ರಾ ತುಳುನಾಡಿನ ಕ್ರಾಂತಿ ಪುರುಷರಾದ ಕೋಟಿ ಚೆನ್ನಯರ ಸುರಿಯವನ್ನು ತಲವಾರಿಗೆ ಹೋಲಿಸಿ ಮಾತನಾಡಿದ್ದಾರೆ. ಅವರಿಗೆ ಸುರಿಯಕ್ಕೂ ತಲವಾರಿಗೂ ಇರುವ ವ್ಯತ್ಯಾಸವೇ ತಿಳಿದಿಲ್ಲ. ಹಾಗಾಗಿ ಅವರಿಗೆ ಕರಾವಳಿಯ ಮಣ್ಣಿನ ಮಹತ್ವವೇ ತಿಳಿದಿಲ್ಲ. ಅವರ ಬುದ್ಧಿವಂತಿಕೆ ಕೇವಲ ಕರತಾಡನಕ್ಕೆ ಸೀಮಿತವಾಗಿದೆ. ಆದ್ದರಿಂದ ಅವರು ತಮ್ಮ ನಾಲಿಗೆ ಹರಿಯಬಿಡುವುದನ್ನು ಇನ್ನಾದರೂ ಜಾಗ್ರತೆ ಮಾಡಿಕೊಳ್ಳಲಿ ಎಂದು ಶಕುಂತಲಾ ಶೆಟ್ಟಿಯವರು ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…