ಮಂಗಳೂರು: ಅದ್ಧೂರಿ ದಸರಾ ಆಯೋಜನೆ: ಶಾಲಾ ಮಕ್ಕಳಿಗೆ ರಜೆ ನಿಡುವಂತೆ ಶಿಕ್ಷಣ ಸಚಿವರಿಗೆ ಶಾಸಕ ಕಾಮತ್ ಮನವಿ – Vishwanews24
ಮಂಗಳೂರು: ಅದ್ಧೂರಿ ದಸರಾ ಆಯೋಜನೆ: ಶಾಲಾ ಮಕ್ಕಳಿಗೆ ರಜೆ ನಿಡುವಂತೆ ಶಿಕ್ಷಣ ಸಚಿವರಿಗೆ ಶಾಸಕ ಕಾಮತ್ ಮನವಿ
ಮಂಗಳೂರು: ಈ ಬಾರಿ ಮುಂಬರುವ ದಸರಾ ಸಂಭ್ರಮವನ್ನು ಮಂಗಳೂರಿನಲ್ಲಿ ಬಹಳ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದು ಈ ಹಿನ್ನೆಲೆ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಲ್ಲಿ ಮನವಿ ಮಾಡಿಕೊಂಡಿದ್ದು ಸಚಿವರು ಕೂಡಾ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಬಾರಿಯ ನವರಾತ್ರಿ ಉತ್ಸವ ಸಪ್ಟೆಂಬರ್ 26 ರಿಂದ ಪ್ರಾರಂಭಗೊಳ್ಳುತ್ತಿದ್ದು ಕಾರ್ಸ್ಟ್ರೀಟ್ನಲ್ಲಿ ಹಾಗೂ ಕುದ್ರೋಳಿ, ಮಂಗಳಾದೇವಿಯಲ್ಲಿ ಶಾರದಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.
ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ನಿಡುವಂತೆ ಮನವಿ ಮಾಡಿದ್ದು ಸಚಿವರು ಧನಾತ್ಮಕವಾಗಿ ಸ್ಪಂದಿಸಿದ್ದಾರೆ.
ಶೀಘ್ರದಲ್ಲಿಯೇ ಆದೇಶವನ್ನು ಸೂಚಿಸಿತ್ತಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ತಂಬಾಕು ಮುಕ್ತ ಅಪಾರ್ಟ್ಮೆಂಟ್ : ಉಡುಪಿಯಲ್ಲಿ ಪೈಲಟ್ ಯೋಜನೆ – Vishwanews24
