ಮಂಗಳೂರು: “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ, ಅವರು ಒಂದು ತರಹ ಜೋಕರ್ ಇದ್ದಂಗೆ” ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಈ ಕುರಿತು ಮಂಗಳೂರು ನಗರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, “ಕುಮಾರಸ್ವಾಮಿ ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಮೆಂಟ್ ಆಗುತ್ತಾರೆ, ಅಂದ್ರೆ ಕುಮಾರಸ್ವಾಮಿಗೆ ನೈತಿಕತೆ, ಸಿದ್ದಾಂತ ಯಾವುದೂ ಇಲ್ಲ. ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಆತಂಕ ಕಾಡುತ್ತಿದೆ. ದಿನಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ” ಎಂದರು.
ಇನ್ನು “ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ. 2023 ರ ಚುನಾವಣೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ನೆಲಕಚ್ಚುತ್ತದೆ ಎಂಬ ವಿಚಾರ ಅರಿತು ಮಾಜಿ ಸಿಎಂ ಕುಮಾರಸ್ವಾಮಿ ಆತಂಕದಲ್ಲಿದ್ದಾರೆ” ಎಂದು ಹೇಳಿದ್ದಾರೆ
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…