Featured

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ – vishwanews24

ಮಂಗಳೂರು: ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕ್ಲಿನಿಕ್,ಲ್ಯಾಬ್‍ಗಳ ಮೇಲೆ ಆರೋಗ್ಯ ಇಲಾಖೆ ದಾಳಿ

ಮಂಗಳೂರು : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್‍ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು ತನಿಖಾ ತಂಡದವರು ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಮೂಡುಶೆಡ್ಡೆ/ ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.

ಮಂಗಳೂರು ನಗರ ಗ್ರಾಮ ಪ್ರದೇಶಗಳಲ್ಲಿ ಈಗಾಗಲೇ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಅಲೋಪತಿ ಕ್ಲಿನಿಕ್, ಆಯುಷ್ ಕ್ಲಿನಿಕ್ , ಡೆಂಟಲ್ ಕ್ಲಿನಿಕ್, ಜನೆಟಿಕ್ ಲ್ಯಾಬೋರೇಟರಿಗಳು, ಫಿಸಿಯೋಥೆರಪಿ ಸೆಂಟರ್‍ಗಳು ಲ್ಯಾಬ್/ಲ್ಯಾಬ್ ಕಲೆಕ್ಷನ್ ಸೆಂಟರ್‍ಗಳು ಇತ್ಯಾದಿಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.

ಈ ಅವಧಿಯೊಳಗೆ ಸಂಬಂಧಿಸಿದ ಕ್ಲಿನಿಕ್ , ಖಾಸಗಿ ಆರೋಗ್ಯ ಸಂಸ್ಥೆಗಳು ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.

Vishwa News 24

Recent Posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ – vishwanews24

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್‌ಎಸ್‌ಎಲ್‌ಸಿ…

10 hours ago

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ – vishwanews24

ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್‌ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…

12 hours ago

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

1 day ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

1 day ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

1 day ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

1 day ago