ಮಂಗಳೂರು : ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕ್ಲಿನಿಕ್, ಪ್ರಯೋಗಾಲಯಗಳ ವಿರುದ್ಧ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017 ರ ಅಡಿಯಲ್ಲಿ ಖಾಸಗಿ ಸಂಸ್ಥೆ/ ಕ್ಲಿನಿಕ್ಗಳು/ ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆ/ ಕ್ಲಿನಿಕ್ ಲ್ಯಾಬೋರೇಟರಿಗಳನ್ನು ತನಿಖಾ ತಂಡದವರು ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಮೂಡುಶೆಡ್ಡೆ/ ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂದು ಕ್ಲಿನಿಕ್ಗೆ ಬೀಗಮುದ್ರೆ ಹಾಕಿದ್ದಾರೆ.
ಮಂಗಳೂರು ನಗರ ಗ್ರಾಮ ಪ್ರದೇಶಗಳಲ್ಲಿ ಈಗಾಗಲೇ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಅಲೋಪತಿ ಕ್ಲಿನಿಕ್, ಆಯುಷ್ ಕ್ಲಿನಿಕ್ , ಡೆಂಟಲ್ ಕ್ಲಿನಿಕ್, ಜನೆಟಿಕ್ ಲ್ಯಾಬೋರೇಟರಿಗಳು, ಫಿಸಿಯೋಥೆರಪಿ ಸೆಂಟರ್ಗಳು ಲ್ಯಾಬ್/ಲ್ಯಾಬ್ ಕಲೆಕ್ಷನ್ ಸೆಂಟರ್ಗಳು ಇತ್ಯಾದಿಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.
ಈ ಅವಧಿಯೊಳಗೆ ಸಂಬಂಧಿಸಿದ ಕ್ಲಿನಿಕ್ , ಖಾಸಗಿ ಆರೋಗ್ಯ ಸಂಸ್ಥೆಗಳು ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…