Featured

ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ  ಪೊಲೀಸ್ ಠಾಣೆಯೇ ಆಸರೆ -Vishwanews24

ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ  ಪೊಲೀಸ್ ಠಾಣೆಯೇ ಆಸರೆ -Vishwanews24

ಮಂಗಳೂರು: ನಾಲ್ಕೂ ದಶಕದ ಹಿಂದೆ ಅನಾಥವಾಗಿದ್ದ ಯುವತಿಗೆ ಇಲ್ಲೊಂದು ಪೊಲೀಸ್ ಠಾಣೆಯ ಸಿಬ್ಬಂದಿಗಳೇ ಕುಟುಂಬ ಸದಸ್ಯರಾಗಿದ್ದಾರೆ. ಯಸ್ ಅನಾಥ ಯುವತಿ ಇದೀಗ 60 ವಯಸ್ಸಿನ ಮಹಿಳೆಯಾಗಿದ್ದು ನಾಲ್ಕೂ ದಶಕದಿಂದ ಈಕೆಗೆ ಠಾಣೆಯೇ ಮನೆಯಾಗಿದೆ.

20 ವರ್ಷಗಳ ಯುವತಿಯಾಗಿದ್ದ ಇವರು ಸುಮಾರು 40 ವರ್ಷಗಳ ಹಿಂದೆ ರೈಲ್ವೆ ನಿಲ್ದಾಣದಲ್ಲಿ ಅನಾಥೆಯಾಗಿ ಪತ್ತೆಯಾಗಿದ್ದರು. ಅಂದಿನ ಪೊಲೀಸ್ ಅಧಿಕಾರಿಯೊಬ್ಬರು ಯಾರೂ ಇಲ್ಲದೆ ಬೀದಿಪಾಲಾಗಿದ್ದ ಇವರಿಗೆ ಠಾಣೆಯಲ್ಲಿಯೇ ಆಶ್ರಯ ನೀಡಿದ್ದರು. ಪೊಲೀಸರೇ ಹೊನ್ನಮ್ಮ ಎಂದು ನಾಮಕರಣ ಮಾಡಿದ್ದರು‌. ಆರಂಭದಲ್ಲಿ ಕುಟುಂಬಸ್ಥರ ಪತ್ತೆಗೆ ಪೊಲೀಸರು ಪ್ರಯತ್ನಪಟ್ಟಿದ್ದರು. ಆದರೆ, ಯಾವುದೇ ಪ್ರಯೋಜನವಾಗದೇ ಇದ್ದ ಸಂದರ್ಭದಲ್ಲಿ ಠಾಣೆಯಲ್ಲಿಯೇ ಅವರಿಗೆ ಜಾಗ ನೀಡಿದ್ದರು. ಬಳಿಕ ಸಣ್ಣಪುಟ್ಟ ಕೆಲಸ ಮಾಡಿಕೊಂಡು 40 ವರ್ಷಗಳಿಂದ ನಗರದ ಬಂದರು ಪೊಲೀಸ್ ಠಾಣೆಯನ್ನೇ ಆಶ್ರಯ, ಆಸರೆ ಮಾಡಿಕೊಂಡಿದ್ದಾರೆ ಹೊನ್ನಮ್ಮ ಅವರು.

ಠಾಣೆಯನ್ನು ಗುಡಿಸಿ, ಒರೆಸಿ, ಒಪ್ಪ ಓರಣಗೊಳಿಸುವ ಕಾರ್ಯವಲ್ಲದೆ, ಪೊಲೀಸರಿಗೆ ಏನಾದರೂ ಸಣ್ಣಪುಟ್ಟ ಕಾರ್ಯದಲ್ಲಿ ನೆರವಾಗುತ್ತಿದ್ದಾರೆ. ಇದಕ್ಕೆ ಅವರಿಗೆ ಸಂಬಳವನ್ನೂ ನೀಡಲಾಗುತ್ತದೆ. ಮಾನವೀಯತೆ ನೆಲೆಯಲ್ಲಿ ಈಕೆಗೆ ಬಂದರು ಪೊಲೀಸ್ ಠಾಣೆಯ ಹೊರಗಡೆಯೇ ಆಶ್ರಯಕ್ಕಾಗಿ ಒಂದು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಕೆಯ ಊಟ, ವಸತಿ, ಆಶ್ರಯ ಎಲ್ಲವೂ ಅಲ್ಲಿಯೇ ಆಗುತ್ತದೆ.

ಮೂಗಿ,ಕಿವುಡಿಯಾದ್ರು ಹೊನ್ನಮ್ಮನದು ಚುರುಕಿನ ವ್ಯಕ್ತಿತ್ವ. ಠಾಣೆಯನ್ನು ಶುಚಿಗೊಳಿಸುವ, ಪೊಲೀಸರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಾರೆ. ಮಾನವೀಯತೆ ನೆಲೆಯಲ್ಲಿ ಠಾಣೆಯ ಹಿಂಭಾಗದಲ್ಲಿ ಪ್ರತ್ಯೇಕ ಕೊಠಡಿ ನೀಡಲಾಗಿದೆ. ಊಟ ತಿಂಡಿಯನ್ನು ಪೊಲೀಸರು ನೀಡುತ್ತಿದ್ದು, ಒಮ್ಮೊಮ್ಮೆ ಇವರೇ ಅಡುಗೆ ತಯಾರಿಸಿಕೊಳ್ಳುತ್ತಾರೆ. ಇದರ ಜೊತೆ ಹೊನ್ನಮ್ಮ ಬ್ಯಾಂಕ್ ಖಾತೆ, ಮತದಾರರ ಚೀಟಿ, ಆಧಾರ್ ಕಾರ್ಡ್ ಹೊಂದಿದ್ದಾರೆ. ಆಧಾರ್ ಕಾರ್ಡ್‌ನಲ್ಲಿ ಪೊಲೀಸ್ ಠಾಣೆಯದ್ದೆ ಖಾಯಂ ವಿಳಾಸವಿದೆ. ಪೊಲೀಸರು ವಿಶೇಷ ಸಂದರ್ಭದಲ್ಲಿ ಈಕೆಗೆ ಹಣ ಕೊಡುತ್ತಾರೆ, ಮಾಡಿದ ಕೆಲಸಕ್ಕೆ ವೇತನವನ್ನು ನೀಡುತ್ತಾರೆ. ಈ ಎಲ್ಲಾ ಹಣವನ್ನು ದುಂದುವೆಚ್ಚ ಮಾಡದೇ ಬ್ಯಾಂಕ್ ಖಾತೆ ಜಮಾ ಮಾಡುತ್ತಾರೆ.

ಪೊಲೀಸ್ ಇಲಾಖೆಯ, ಸಿಬ್ಬಂದಿಗಳ ಮನೆಯಲ್ಲಿ ಕಾರ್ಯಕ್ರಮವಿದ್ದರೆ ಇವರಿಗೆ ಗೊತ್ತಾಗುತ್ತೆ. ಹೊಸ ಸೀರೆ ಎಲ್ಲಾ ಉಟ್ಟು ಇವರು ರೆಡಿಯಾಗುತ್ತಾರೆ. ಒಟ್ಟಿನಲ್ಲಿ ಹೊನ್ನಮ್ಮನಿಗೆ ಬಂದರು ಠಾಣೆಯೆ ಮನೆಯಾಗಿದ್ದು, ಭಾವನಾತ್ಮಕ ನಂಟು ಹೊಂದಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago