ಮಂಗಳೂರು: ನಾಲ್ಕೂ ದಶಕದ ಹಿಂದೆ ಅನಾಥವಾಗಿದ್ದ ಯುವತಿಗೆ ಇಲ್ಲೊಂದು ಪೊಲೀಸ್ ಠಾಣೆಯ ಸಿಬ್ಬಂದಿಗಳೇ ಕುಟುಂಬ ಸದಸ್ಯರಾಗಿದ್ದಾರೆ. ಯಸ್ ಅನಾಥ ಯುವತಿ ಇದೀಗ 60 ವಯಸ್ಸಿನ ಮಹಿಳೆಯಾಗಿದ್ದು ನಾಲ್ಕೂ ದಶಕದಿಂದ ಈಕೆಗೆ ಠಾಣೆಯೇ ಮನೆಯಾಗಿದೆ.
20 ವರ್ಷಗಳ ಯುವತಿಯಾಗಿದ್ದ ಇವರು ಸುಮಾರು 40 ವರ್ಷಗಳ ಹಿಂದೆ ರೈಲ್ವೆ ನಿಲ್ದಾಣದಲ್ಲಿ ಅನಾಥೆಯಾಗಿ ಪತ್ತೆಯಾಗಿದ್ದರು. ಅಂದಿನ ಪೊಲೀಸ್ ಅಧಿಕಾರಿಯೊಬ್ಬರು ಯಾರೂ ಇಲ್ಲದೆ ಬೀದಿಪಾಲಾಗಿದ್ದ ಇವರಿಗೆ ಠಾಣೆಯಲ್ಲಿಯೇ ಆಶ್ರಯ ನೀಡಿದ್ದರು. ಪೊಲೀಸರೇ ಹೊನ್ನಮ್ಮ ಎಂದು ನಾಮಕರಣ ಮಾಡಿದ್ದರು. ಆರಂಭದಲ್ಲಿ ಕುಟುಂಬಸ್ಥರ ಪತ್ತೆಗೆ ಪೊಲೀಸರು ಪ್ರಯತ್ನಪಟ್ಟಿದ್ದರು. ಆದರೆ, ಯಾವುದೇ ಪ್ರಯೋಜನವಾಗದೇ ಇದ್ದ ಸಂದರ್ಭದಲ್ಲಿ ಠಾಣೆಯಲ್ಲಿಯೇ ಅವರಿಗೆ ಜಾಗ ನೀಡಿದ್ದರು. ಬಳಿಕ ಸಣ್ಣಪುಟ್ಟ ಕೆಲಸ ಮಾಡಿಕೊಂಡು 40 ವರ್ಷಗಳಿಂದ ನಗರದ ಬಂದರು ಪೊಲೀಸ್ ಠಾಣೆಯನ್ನೇ ಆಶ್ರಯ, ಆಸರೆ ಮಾಡಿಕೊಂಡಿದ್ದಾರೆ ಹೊನ್ನಮ್ಮ ಅವರು.
ಠಾಣೆಯನ್ನು ಗುಡಿಸಿ, ಒರೆಸಿ, ಒಪ್ಪ ಓರಣಗೊಳಿಸುವ ಕಾರ್ಯವಲ್ಲದೆ, ಪೊಲೀಸರಿಗೆ ಏನಾದರೂ ಸಣ್ಣಪುಟ್ಟ ಕಾರ್ಯದಲ್ಲಿ ನೆರವಾಗುತ್ತಿದ್ದಾರೆ. ಇದಕ್ಕೆ ಅವರಿಗೆ ಸಂಬಳವನ್ನೂ ನೀಡಲಾಗುತ್ತದೆ. ಮಾನವೀಯತೆ ನೆಲೆಯಲ್ಲಿ ಈಕೆಗೆ ಬಂದರು ಪೊಲೀಸ್ ಠಾಣೆಯ ಹೊರಗಡೆಯೇ ಆಶ್ರಯಕ್ಕಾಗಿ ಒಂದು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಕೆಯ ಊಟ, ವಸತಿ, ಆಶ್ರಯ ಎಲ್ಲವೂ ಅಲ್ಲಿಯೇ ಆಗುತ್ತದೆ.
ಮೂಗಿ,ಕಿವುಡಿಯಾದ್ರು ಹೊನ್ನಮ್ಮನದು ಚುರುಕಿನ ವ್ಯಕ್ತಿತ್ವ. ಠಾಣೆಯನ್ನು ಶುಚಿಗೊಳಿಸುವ, ಪೊಲೀಸರಿಗೆ ಸಹಾಯ ಮಾಡುವ ಕೆಲಸ ಮಾಡುತ್ತಾರೆ. ಮಾನವೀಯತೆ ನೆಲೆಯಲ್ಲಿ ಠಾಣೆಯ ಹಿಂಭಾಗದಲ್ಲಿ ಪ್ರತ್ಯೇಕ ಕೊಠಡಿ ನೀಡಲಾಗಿದೆ. ಊಟ ತಿಂಡಿಯನ್ನು ಪೊಲೀಸರು ನೀಡುತ್ತಿದ್ದು, ಒಮ್ಮೊಮ್ಮೆ ಇವರೇ ಅಡುಗೆ ತಯಾರಿಸಿಕೊಳ್ಳುತ್ತಾರೆ. ಇದರ ಜೊತೆ ಹೊನ್ನಮ್ಮ ಬ್ಯಾಂಕ್ ಖಾತೆ, ಮತದಾರರ ಚೀಟಿ, ಆಧಾರ್ ಕಾರ್ಡ್ ಹೊಂದಿದ್ದಾರೆ. ಆಧಾರ್ ಕಾರ್ಡ್ನಲ್ಲಿ ಪೊಲೀಸ್ ಠಾಣೆಯದ್ದೆ ಖಾಯಂ ವಿಳಾಸವಿದೆ. ಪೊಲೀಸರು ವಿಶೇಷ ಸಂದರ್ಭದಲ್ಲಿ ಈಕೆಗೆ ಹಣ ಕೊಡುತ್ತಾರೆ, ಮಾಡಿದ ಕೆಲಸಕ್ಕೆ ವೇತನವನ್ನು ನೀಡುತ್ತಾರೆ. ಈ ಎಲ್ಲಾ ಹಣವನ್ನು ದುಂದುವೆಚ್ಚ ಮಾಡದೇ ಬ್ಯಾಂಕ್ ಖಾತೆ ಜಮಾ ಮಾಡುತ್ತಾರೆ.
ಪೊಲೀಸ್ ಇಲಾಖೆಯ, ಸಿಬ್ಬಂದಿಗಳ ಮನೆಯಲ್ಲಿ ಕಾರ್ಯಕ್ರಮವಿದ್ದರೆ ಇವರಿಗೆ ಗೊತ್ತಾಗುತ್ತೆ. ಹೊಸ ಸೀರೆ ಎಲ್ಲಾ ಉಟ್ಟು ಇವರು ರೆಡಿಯಾಗುತ್ತಾರೆ. ಒಟ್ಟಿನಲ್ಲಿ ಹೊನ್ನಮ್ಮನಿಗೆ ಬಂದರು ಠಾಣೆಯೆ ಮನೆಯಾಗಿದ್ದು, ಭಾವನಾತ್ಮಕ ನಂಟು ಹೊಂದಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…