Featured

ಮಂಗಳೂರು : ಅನುಶ್ರೀ ಮೇಲಿನ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ : ಎನ್. ಶಶಿಕುಮಾರ್ -Vishwanews24

ಮಂಗಳೂರು : ಅನುಶ್ರೀ ಮೇಲಿನ ಆರೋಪಕ್ಕೆ ಯಾವುದೇ ಸಾಕ್ಷಿ ಇಲ್ಲ : ಎನ್. ಶಶಿಕುಮಾರ್ -Vishwanews24

ಮಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಅನುಶ್ರೀ ಹೆಸರನ್ನು ಕೈಬಿಟ್ಟಿರುವುದಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಿರೂಪಕಿ ಅನುಶ್ರೀ ವಿರುದ್ದ ಯಾವುದೇ ಸಾಕ್ಷಿಗಳಿಲ್ಲದ ಕಾರಣ ಅವರನ್ನು ಪ್ರಕರಣದಿಂದ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

ಮತ್ತೊಬ್ಬ ಆರೋಪಿ ಕಿಶೋರ್ ಅಮನ್ ಶೆಟ್ಟಿ ಚಾರ್ಜ್ ಶೀಟ್ ನಲ್ಲಿರುವ ಹೇಳಿಕೆಗಳನ್ನು ನನ್ನದಲ್ಲ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಚಾರ್ಜ್ ಶೀಟ್ಸಲ್ಲಿಕೆ ವಿಚಾರವಾಗಿ ಯಾವುದೇ ಆರೋಪಗಳಿದ್ದರೆ ವಕೀಲರ ಮೂಲಕ ಕೋರ್ಟ್ ಗೆ ಹೇಳಬಹುದು ಎಂದಿದ್ದಾರೆ.

ಆ ಕೇಸ್‌ನ ಸ್ಟೇಟಸ್‌‌ ಬಗ್ಗೆ ಮಾಹಿತಿ ಪಡೆದಿದ್ದೇನೆ. ಚಾರ್ಜ್ ಶೀಟ್‌ ಪ್ರಕರಣದ ಅಂತಿಮ ವರದಿಯಾಗಿರುತ್ತದೆ. ಅದು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಟ್ರಯಲ್‌ ನಡೆಯುತ್ತಿದೆ. ಪ್ರಕರಣದ ಸಂಬಂಧ ಮತ್ತೆ ಅನುಶ್ರೀ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇಲ್ಲ” ಎಂದು ಹೇಳಿದ್ದಾರೆ.

ಒಂಭತ್ತು ತಿಂಗಳ ಹಿಂದೆಯೇ ಅಂತಿಮ ವರದಿ ಸಲ್ಲಿಸಿದ್ದೇವೆ. ಈಗ ಯಾಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ ಎಂದಿದ್ದಾರೆ. ಅನುಶ್ರೀ ಮೇಲೆ ಬಂದ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ. ಆರು ಜನ ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಐದು ಜನ ಆರೋಪಿಗಳಿಗೆ ಜಾಮೀನು ಆಗಿದ್ದು, ಒಬ್ಬ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. 2020 ರ ಸೆಪ್ಟೆಂಬರ್ 19 ಕ್ಕೆ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಡಿಸೆಂಬರ್ 11 ಕ್ಕೆ ಅಂತಿಮ ವರದಿ ಸಲ್ಲಿಸಿದ್ದೇವೆ ಎಂದು ವಿವರಿಸಿದ್ದಾರೆ.

Vishwa News 24

Recent Posts

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

39 minutes ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

1 hour ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

2 hours ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

2 hours ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

2 hours ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

2 hours ago