Featured

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ  ಡಾ.ಪದ್ಮನಾಭ ಕಾಮತ್‌ -Vishwanews24

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ  ಡಾ.ಪದ್ಮನಾಭ ಕಾಮತ್‌ -Vishwanews24

ಮಂಗಳೂರು :  ಅಪ್ಪನ ಸಾವಿನ ನೋವಿನಲ್ಲೂ ಇಬ್ಬರ ಜೀವ ಉಳಿಸುವ ಮೂಲಕ ಮಂಗಳೂರಿನ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅವರು ವೈದ್ಯ ವೃತ್ತಿಯ ಸಾರ್ಥಕತೆ ಮೆರೆದಿದ್ದು, ‘ವೈದ್ಯೋ ನಾರಾಯಣೋ ಹರಿಃ’ ಎಂಬುದನ್ನು ಅಕ್ಷರಶಃ ಸಾಬೀತು ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್‌ ಫೆ.26ರಂದು ರಾತ್ರಿ ಎಂದಿನಂತೆ ರೋಗಿಗಳ ಪರೀಕ್ಷೆಯಲ್ಲಿ ನಿರತರಾಗಿದ್ದರು. ಈ ವೇಳೆ ಪದ್ಮನಾಭ್‌ ಅವರ ತಂದೆ, ದ.ಕ. ಜಿಲ್ಲೆಯ ಮಾಜಿ ಮಲೇರಿಯಾ ಅಧಿಕಾರಿ ಡಾ. ಮಂಜುನಾಥ ಕಾಮತ್‌ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಮನೆಯಿಂದ ಫೋನ್‌ ಬಂದಿತ್ತು. ಕೂಡಲೇ ಮನೆಗೆ ತೆರಳಿದ ಪದ್ಮನಾಭ್‌, ತುರ್ತು ಚಿಕಿತ್ಸೆ ನೀಡಿದರಾದರೂ ವಯೋ ಸಹಜವಾಗಿಯೇ ಅವರ ಕಣ್ಣ ಮುಂದೆಯೇ ತಂದೆ ತೀರಿಕೊಂಡಿದ್ದರು.

ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

ತಕ್ಷಣ ತಂದೆಯವರ ಶರೀರವನ್ನು ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಸಾವನ್ನು ಖಚಿತ ಪಡಿಸಿದ್ದರು. ಮೃತದೇಹ ಹಸ್ತಾಂತರಕ್ಕೆ ಇನ್ನೂ ಕೆಲವು ಸಮಯ ಇದ್ದಾಗ, ಹೃದ್ರೋಗಿಯೊಬ್ಬರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯ ಇರುವುದಾಗಿ ಕರೆ ಬಂದಿತ್ತು. ಪದ್ಮನಾಭ್‌ ಅವರು ತಂದೆಯನ್ನು ಕಳೆದುಕೊಂಡ ನೋವಲ್ಲೂ, ರೋಗಿಯ ಶಸ್ತ್ರಚಿಕಿತ್ಸೆ ನೆರವೇರಿಸಿದರು, ಜೀವದಾನ ಮಾಡಿದ್ದರು.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ಇನ್ನು ಫೆ.27ರಂದು ಮಂಜುನಾಥ ಕಾಮತ್‌ ಅವರ ಅಂತ್ಯಕ್ರಿಯೆ ನೆರವೇರಿತು. ಅಪ್ಪನ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಪದ್ಮನಾಭ ಕಾಮತ್‌ ಅವರಿಗೆ ಸ್ನಾತಕೋತ್ತರ ವಿದ್ಯಾರ್ಥಿಯಿಂದ ಪದೇ ಪದೆ ಫೋನ್‌ ಕರೆ ಬರತೊಡಗಿತ್ತು. ಕರೆ ಸ್ವೀಕರಿಸಿದರೆ ಆಸ್ಪತ್ರೆಯ ಅಡುಗೆ ಸಿಬ್ಬಂದಿಯೊಬ್ಬರಿಗೆ ತೀವ್ರ ಹೃದಯಾಘಾತವಾಗಿರುವುದು ತಿಳಿಯಿತು. ಕೂಡಲೇ ಆಸ್ಪತ್ರೆಗೆ ಹೊರಟ ಕಾಮತರು, ಕೆಲವೇ ನಿಮಿಷಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಡಾ. ಪದ್ಮನಾಭ ಕಾಮತ್‌ ಅವರು ಅಪರೂಪದ ಕರ್ತವ್ಯನಿಷ್ಠೆ ಮೆರೆದಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24

ರೋಗಿಯ ಒಳಿತೇ ನನ್ನ ಆದ್ಯ ಕರ್ತವ್ಯವಾಗಿತ್ತು. ಹಾಗಾಗಿ ರೋಗಿಯನ್ನು ಉಳಿಸಲು ಆಸ್ಪತ್ರೆಗೆ ಹೊರಟಾಗ ಯಾವುದೇ ರೀತಿಯ ಅಸ್ಥೈರ್ಯ ನನಗಾಗಲಿಲ್ಲ. ಅಂತಿಮವಾಗಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಂಡಿದ್ದೇನೆ.

– ಡಾ. ಪದ್ಮನಾಭ ಕಾಮತ್‌, ಹೃದ್ರೋಗ ವೈದ್ಯ

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

3 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

19 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

34 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago