ಮಂಗಳೂರು : ಅಪ್ಪನ ಸಾವಿನ ನೋವಿನಲ್ಲೂ ಇಬ್ಬರ ಜೀವ ಉಳಿಸುವ ಮೂಲಕ ಮಂಗಳೂರಿನ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಅವರು ವೈದ್ಯ ವೃತ್ತಿಯ ಸಾರ್ಥಕತೆ ಮೆರೆದಿದ್ದು, ‘ವೈದ್ಯೋ ನಾರಾಯಣೋ ಹರಿಃ’ ಎಂಬುದನ್ನು ಅಕ್ಷರಶಃ ಸಾಬೀತು ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ಮಂಗಳೂರು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್ ಫೆ.26ರಂದು ರಾತ್ರಿ ಎಂದಿನಂತೆ ರೋಗಿಗಳ ಪರೀಕ್ಷೆಯಲ್ಲಿ ನಿರತರಾಗಿದ್ದರು. ಈ ವೇಳೆ ಪದ್ಮನಾಭ್ ಅವರ ತಂದೆ, ದ.ಕ. ಜಿಲ್ಲೆಯ ಮಾಜಿ ಮಲೇರಿಯಾ ಅಧಿಕಾರಿ ಡಾ. ಮಂಜುನಾಥ ಕಾಮತ್ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಮನೆಯಿಂದ ಫೋನ್ ಬಂದಿತ್ತು. ಕೂಡಲೇ ಮನೆಗೆ ತೆರಳಿದ ಪದ್ಮನಾಭ್, ತುರ್ತು ಚಿಕಿತ್ಸೆ ನೀಡಿದರಾದರೂ ವಯೋ ಸಹಜವಾಗಿಯೇ ಅವರ ಕಣ್ಣ ಮುಂದೆಯೇ ತಂದೆ ತೀರಿಕೊಂಡಿದ್ದರು.
ಕಾಂಗ್ರೆಸ್ ಪಕ್ಷವು ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್ ಶಾ -Vishwanews24
ತಕ್ಷಣ ತಂದೆಯವರ ಶರೀರವನ್ನು ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಸಾವನ್ನು ಖಚಿತ ಪಡಿಸಿದ್ದರು. ಮೃತದೇಹ ಹಸ್ತಾಂತರಕ್ಕೆ ಇನ್ನೂ ಕೆಲವು ಸಮಯ ಇದ್ದಾಗ, ಹೃದ್ರೋಗಿಯೊಬ್ಬರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯ ಇರುವುದಾಗಿ ಕರೆ ಬಂದಿತ್ತು. ಪದ್ಮನಾಭ್ ಅವರು ತಂದೆಯನ್ನು ಕಳೆದುಕೊಂಡ ನೋವಲ್ಲೂ, ರೋಗಿಯ ಶಸ್ತ್ರಚಿಕಿತ್ಸೆ ನೆರವೇರಿಸಿದರು, ಜೀವದಾನ ಮಾಡಿದ್ದರು.
ಇನ್ನು ಫೆ.27ರಂದು ಮಂಜುನಾಥ ಕಾಮತ್ ಅವರ ಅಂತ್ಯಕ್ರಿಯೆ ನೆರವೇರಿತು. ಅಪ್ಪನ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಪದ್ಮನಾಭ ಕಾಮತ್ ಅವರಿಗೆ ಸ್ನಾತಕೋತ್ತರ ವಿದ್ಯಾರ್ಥಿಯಿಂದ ಪದೇ ಪದೆ ಫೋನ್ ಕರೆ ಬರತೊಡಗಿತ್ತು. ಕರೆ ಸ್ವೀಕರಿಸಿದರೆ ಆಸ್ಪತ್ರೆಯ ಅಡುಗೆ ಸಿಬ್ಬಂದಿಯೊಬ್ಬರಿಗೆ ತೀವ್ರ ಹೃದಯಾಘಾತವಾಗಿರುವುದು ತಿಳಿಯಿತು. ಕೂಡಲೇ ಆಸ್ಪತ್ರೆಗೆ ಹೊರಟ ಕಾಮತರು, ಕೆಲವೇ ನಿಮಿಷಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಡಾ. ಪದ್ಮನಾಭ ಕಾಮತ್ ಅವರು ಅಪರೂಪದ ಕರ್ತವ್ಯನಿಷ್ಠೆ ಮೆರೆದಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24
ರೋಗಿಯ ಒಳಿತೇ ನನ್ನ ಆದ್ಯ ಕರ್ತವ್ಯವಾಗಿತ್ತು. ಹಾಗಾಗಿ ರೋಗಿಯನ್ನು ಉಳಿಸಲು ಆಸ್ಪತ್ರೆಗೆ ಹೊರಟಾಗ ಯಾವುದೇ ರೀತಿಯ ಅಸ್ಥೈರ್ಯ ನನಗಾಗಲಿಲ್ಲ. ಅಂತಿಮವಾಗಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಂಡಿದ್ದೇನೆ.
– ಡಾ. ಪದ್ಮನಾಭ ಕಾಮತ್, ಹೃದ್ರೋಗ ವೈದ್ಯ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…