Featured

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ  ಡಾ.ಪದ್ಮನಾಭ ಕಾಮತ್‌ -Vishwanews24

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ  ಡಾ.ಪದ್ಮನಾಭ ಕಾಮತ್‌ -Vishwanews24

ಮಂಗಳೂರು :  ಅಪ್ಪನ ಸಾವಿನ ನೋವಿನಲ್ಲೂ ಇಬ್ಬರ ಜೀವ ಉಳಿಸುವ ಮೂಲಕ ಮಂಗಳೂರಿನ ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್‌ ಅವರು ವೈದ್ಯ ವೃತ್ತಿಯ ಸಾರ್ಥಕತೆ ಮೆರೆದಿದ್ದು, ‘ವೈದ್ಯೋ ನಾರಾಯಣೋ ಹರಿಃ’ ಎಂಬುದನ್ನು ಅಕ್ಷರಶಃ ಸಾಬೀತು ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

ಮಂಗಳೂರು ಕೆಎಂಸಿ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮನಾಭ ಕಾಮತ್‌ ಫೆ.26ರಂದು ರಾತ್ರಿ ಎಂದಿನಂತೆ ರೋಗಿಗಳ ಪರೀಕ್ಷೆಯಲ್ಲಿ ನಿರತರಾಗಿದ್ದರು. ಈ ವೇಳೆ ಪದ್ಮನಾಭ್‌ ಅವರ ತಂದೆ, ದ.ಕ. ಜಿಲ್ಲೆಯ ಮಾಜಿ ಮಲೇರಿಯಾ ಅಧಿಕಾರಿ ಡಾ. ಮಂಜುನಾಥ ಕಾಮತ್‌ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಮನೆಯಿಂದ ಫೋನ್‌ ಬಂದಿತ್ತು. ಕೂಡಲೇ ಮನೆಗೆ ತೆರಳಿದ ಪದ್ಮನಾಭ್‌, ತುರ್ತು ಚಿಕಿತ್ಸೆ ನೀಡಿದರಾದರೂ ವಯೋ ಸಹಜವಾಗಿಯೇ ಅವರ ಕಣ್ಣ ಮುಂದೆಯೇ ತಂದೆ ತೀರಿಕೊಂಡಿದ್ದರು.

ಕಾಂಗ್ರೆಸ್‌ ಪಕ್ಷವು ‍ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್‌ ಶಾ -Vishwanews24

ತಕ್ಷಣ ತಂದೆಯವರ ಶರೀರವನ್ನು ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದರು. ಈ ವೇಳೆ ಪರೀಕ್ಷೆ ನಡೆಸಿದ ವೈದ್ಯರು ಸಾವನ್ನು ಖಚಿತ ಪಡಿಸಿದ್ದರು. ಮೃತದೇಹ ಹಸ್ತಾಂತರಕ್ಕೆ ಇನ್ನೂ ಕೆಲವು ಸಮಯ ಇದ್ದಾಗ, ಹೃದ್ರೋಗಿಯೊಬ್ಬರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯ ಇರುವುದಾಗಿ ಕರೆ ಬಂದಿತ್ತು. ಪದ್ಮನಾಭ್‌ ಅವರು ತಂದೆಯನ್ನು ಕಳೆದುಕೊಂಡ ನೋವಲ್ಲೂ, ರೋಗಿಯ ಶಸ್ತ್ರಚಿಕಿತ್ಸೆ ನೆರವೇರಿಸಿದರು, ಜೀವದಾನ ಮಾಡಿದ್ದರು.

ಬದುಕಿನ‌ ಕೊನೆ ಉಸಿರಿರುವವರೆಗೆ ರಾಜ್ಯದ ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಕ್ತಿಮೀರಿ ದುಡಿಯುತ್ತೇನೆ : ಸಿಎಂ BSY -Vishwanews24

ಇನ್ನು ಫೆ.27ರಂದು ಮಂಜುನಾಥ ಕಾಮತ್‌ ಅವರ ಅಂತ್ಯಕ್ರಿಯೆ ನೆರವೇರಿತು. ಅಪ್ಪನ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಪದ್ಮನಾಭ ಕಾಮತ್‌ ಅವರಿಗೆ ಸ್ನಾತಕೋತ್ತರ ವಿದ್ಯಾರ್ಥಿಯಿಂದ ಪದೇ ಪದೆ ಫೋನ್‌ ಕರೆ ಬರತೊಡಗಿತ್ತು. ಕರೆ ಸ್ವೀಕರಿಸಿದರೆ ಆಸ್ಪತ್ರೆಯ ಅಡುಗೆ ಸಿಬ್ಬಂದಿಯೊಬ್ಬರಿಗೆ ತೀವ್ರ ಹೃದಯಾಘಾತವಾಗಿರುವುದು ತಿಳಿಯಿತು. ಕೂಡಲೇ ಆಸ್ಪತ್ರೆಗೆ ಹೊರಟ ಕಾಮತರು, ಕೆಲವೇ ನಿಮಿಷಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮುಗಿಸಿದರು. ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಡಾ. ಪದ್ಮನಾಭ ಕಾಮತ್‌ ಅವರು ಅಪರೂಪದ ಕರ್ತವ್ಯನಿಷ್ಠೆ ಮೆರೆದಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24

ರೋಗಿಯ ಒಳಿತೇ ನನ್ನ ಆದ್ಯ ಕರ್ತವ್ಯವಾಗಿತ್ತು. ಹಾಗಾಗಿ ರೋಗಿಯನ್ನು ಉಳಿಸಲು ಆಸ್ಪತ್ರೆಗೆ ಹೊರಟಾಗ ಯಾವುದೇ ರೀತಿಯ ಅಸ್ಥೈರ್ಯ ನನಗಾಗಲಿಲ್ಲ. ಅಂತಿಮವಾಗಿ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಂಡಿದ್ದೇನೆ.

– ಡಾ. ಪದ್ಮನಾಭ ಕಾಮತ್‌, ಹೃದ್ರೋಗ ವೈದ್ಯ

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago