Featured

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಮೂವರ ಬಂಧನ -Vishwanews24

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಮೂವರ ಬಂಧನ -Vishwanews24

ಮಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೂವರನ್ನು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು ಹಾಗೂ ಮತ್ತೊಬ್ಬ ಕಾಸರಗೋಡಿನವರು ಎಂದು ತಿಳಿದು ಬಂದಿದೆ.

ಮುಡಿಪುವಿನ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಸಿನವಳಾಗಿರುವ ಮಗಳಿಗೆ ಆಲ್ಕೋಹಾಲ್ ಕುಡಿಸಿ ಮತ್ತು ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.

ಈ ಹಿಂದೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲಿಂಬಿಗುಡ್ಡೆ ಎಂಬಲ್ಲಿ ನಡೆದ ಪ್ರಕರಣದ ಆರೋಪಿಗಳಲ್ಲಿ ಓರ್ವ ಈ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಚಿಲಿಂಬಿ ಗುಡ್ಡದ ಪ್ರಕರಣದಲ್ಲೂ ಬಾಲಕಿ ತಾಯಿಯ ದೂರಿನ ಮೇರೆಗೆ ಪೊಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಬಾಲಕಿ ಈ ಹಿಂದೆ ನಾಪತ್ತೆಯಾಗಿದ್ದಾಳೆಂದು ಪೋಷಕರು ದೂರು ನೀಡಿದ್ದರು. ಬಳಿಕ ನಾಪತ್ತೆಯಾಗಿಲ್ಲ ಬದಲಿಗೆ ಆಕೆಗೆ ಯಾರೋ ಚುಡಾಯಿಸಿರುವುದು ಗಮನಕ್ಕೆ ಬಂದಿದ್ದು, ಬಾಲಕಿ ಆ ಸಂದರ್ಭ ಠಾಣೆಗೆ ಬಂದಿದ್ದಾಗ, ಹೆಡ್ ಕಾನ್ಸ್‌ಸ್ಟೆಬಲ್ ಆಕೆಯ ಪೋನ್ ನಂಬರ್ ಪಡೆದು ಆಕೆಯ ಜತೆ ಅನುಚಿತವಾಗಿ ಮೊಬೈಲ್ ಸಂದೇಶಗಳನ್ನು ಹಂಚಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಹೆಡ್‌ಕಾನ್‌ಸ್ಟೇಬಲ್ ನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿತ್ತು.

ಇನ್ನು ಘಟನೆಯ ಬಗ್ಗೆ ಬಾಲಕಿಯ ತಾಯಿ ಹೇಳುವಂತೆ, ಅವರೆಲ್ಲರು ಪರಿಚಯಿಸ್ಥರಾಗಿದ್ದು, ಈ ಹಿಂದೆಯೂ ತನ್ನ ಸ್ನೇಹಿತೆಯರ ಜತೆ ಹೋಗುತ್ತಿದ್ದಳು. ಇದೀಗ ಹುಡುಗರ ಜತೆ ಹೋಗಿದ್ದಾಳೆಂಬ ಹಿನ್ನೆಲೆಯಲ್ಲಿ ದೂರು ನೀಡಿದ್ದು, ಪೊಕ್ಸೋ ಪ್ರಕರದಡಿ ಮೂರು ಮಂದಿಯನ್ನು ಬಂಧಿಸಲಾಗಿದೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

10 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

12 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

12 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

13 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

13 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

13 hours ago