Featured

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ – vishwanews24

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್(27) ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ಹಿನ್ನೆಲೆ
ಈ ಪ್ರಕರಣದ 13 ವರ್ಷದ ಸಂತ್ರಸ್ತ ಬಾಲಕಿಯು ಆರೋಪಿ ಸುಧೀರ್‌ನ ಮನೆಗೆ ರಜಾ ದಿನಗಳಲ್ಲಿ ಹಾಗೆಯೇ ಇತರ ದಿನಗಳಲ್ಲಿ ಟಿ.ವಿ. ನೋಡಲು ಹೋಗುತ್ತಿದ್ದಳು. ಕೆಲವೊಂದು ಬಾರಿ ಸುಧೀರ್ ಮಾತ್ರ ಮನೆಯಲ್ಲಿರುತ್ತಿದ್ದನು. ಬಾಲಕಿಯು 2021ನೇ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಆತನ ಮನೆಗೆ ಟಿ.ವಿ. ನೋಡಲು ತೆರಳಿದ್ದಾಗ ಅಂಗಡಿಗೆ ಹೋಗಿ ಬರೋಣವೆಂದು ಹೇಳಿ, ಅಂಗಡಿಗೆ ಕರೆದುಕೊಂಡು ಹೋಗದೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ಸುಧೀರ್‌ನ ಅಜ್ಜಿಯ ಯಾರೂ ವಾಸವಿಲ್ಲದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದನು.

ಈ ವಿಚಾರವನ್ನು ತಾಯಿಗೆ ಹೇಳುತ್ತೇನೆ ಎಂದು ಬಾಲಕಿ ಹೇಳಿದಾಗ ತಾಯಿಗೆ ಹೇಳಿದರೆ ನೀನೆ ನನ್ನ ಬಳಿ ಬಂದದ್ದು ಎಂದು ಹೇಳಿ ಪೊಲೀಸ್ ದೂರು ನೀಡುತ್ತೇನೆ ಎಂದು ಹೇಳಿ ಹೆದರಿಸಿದ್ದ. ಅನಂತರದ ದಿನಗಳಲ್ಲೂ ಬಾಲಕಿ ಆತನ ಮನೆಗೆ ರಜಾ ದಿನಗಳಲ್ಲಿ ಟಿ.ವಿ. ನೋಡಲು ಹೋದಾಗ ಮನೆಯಲ್ಲಿ ಯಾರೂ ಇಲ್ಲದೆ ಇದ್ದಾಗ ಅತ್ಯಾಚಾರವೆಸಗಿದ್ದ. ಜೊತಗೆ ಆತನ ಅಜ್ಜಿ ಮನೆಯಲ್ಲಿಯೂ ಹಲವಾರು ಬಾರಿ ಅತ್ಯಾಚಾರ ಎಸಗಿದ್ದ. ಬಾಲಕಿಯು 2022 ಆಗಸ್ಟ್ ತಿಂಗಳ ಬಳಿಕ ಗರ್ಭಿಣಿಯಾಗಿದ್ದಳು.

ನಂತರ ಆರೋಪಿ ಮತ್ತು ಇತರರು ಸೇರಿ ಚಿಕ್ಕಮಗಳೂರು ಕಡೆ ಎಲ್ಲಿಯಾದರೂ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸುವುದಾಗಿ ಯೋಜನೆ ರೂಪಿಸಿದ್ದರು. ಮದುವೆ ಆಗಿದ್ದು ಗಂಡ-ಹೆಂಡತಿ ಎಂದು ಆಸ್ಪತ್ರೆಯವರಿಗೆ ನಂಬಿಸಲು ಆಕೆಗೆ ಕಾಲುಂಗುರ, ಬೆಳ್ಳಿಯ ಕರಿಮಣಿ ಸರ ಹಾಕಿಸಿ ಮದುಮಗಳಂತೆ ಅಲಂಕರಿಸಿ ಆತನನೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಾಲಕಿಯ ಮನೆಗೆ ತೆರಳಿ ಆಕೆಯ ತಾಯಿಗೆ ಮದುವೆ ಮತ್ತು ಬರ್ತ್ಡೇಗೆ ಹೋಗಲು ಇದೆ ಎಂದು ಹೇಳಿ ನೊಂದ ಬಾಲಕಿಯನ್ನು ಸುಧೀರ್ ಮತ್ತು ಇತರರು 2022ರ ಡಿ. 17ರಂದು ಚಿಕ್ಕಮಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಯಲ್ಲಿ ಆಕೆ ತನ್ನ ಹೆಂಡತಿ ಎಂದು ವೈದ್ಯರಿಗೆ ತಿಳಿಸಿ ಗರ್ಭಪಾತ ಮಾಡಿಸಿದ್ದ.

ಬಳಿಕ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಆಗಿನ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಸತ್ಯನಾರಾಯಣ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಚಾರ್ಜ್ ಶೀಟ್ ಅನ್ನು ಕೋರ್ಟ್ ಗೆ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಯ ವಿರುದ್ಧ ಅಪರಾಧ ಸಾಬೀತಾಗಿದೆ. ಈ ಹಿನ್ನೆಲೆ ಅತ್ಯಾಚಾರ ಮಾಡಿದ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ: 376 ಮತ್ತು ಕಲಂ: 6 ಪೊಕ್ಸೊ ಕಾಯ್ದೆಯಂತೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಲಾಗಿದೆ. ಸಾಕ್ಷ್ಯನಾಶ ಮಾಡಿದ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ: 201ರಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ. ದಂಡದ ಹಣವಾದ 50 ಸಾವಿರ ರೂ. ಅನ್ನು ನೊಂದ ಬಾಲಕಿಗೆ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.

ದಂಡ ಪ್ರಕ್ರಿಯೆ ಸಂಹಿತೆಯ ಕಲಂ: 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ 2 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶಿಸಲಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

18 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

19 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

19 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

19 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

21 hours ago