Featured

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ – vishwanews24

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣ ;  ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್(27) ಶಿಕ್ಷೆಗೊಳಗಾದ ಅಪರಾಧಿ.

ಪ್ರಕರಣದ ಹಿನ್ನೆಲೆ
ಈ ಪ್ರಕರಣದ 13 ವರ್ಷದ ಸಂತ್ರಸ್ತ ಬಾಲಕಿಯು ಆರೋಪಿ ಸುಧೀರ್‌ನ ಮನೆಗೆ ರಜಾ ದಿನಗಳಲ್ಲಿ ಹಾಗೆಯೇ ಇತರ ದಿನಗಳಲ್ಲಿ ಟಿ.ವಿ. ನೋಡಲು ಹೋಗುತ್ತಿದ್ದಳು. ಕೆಲವೊಂದು ಬಾರಿ ಸುಧೀರ್ ಮಾತ್ರ ಮನೆಯಲ್ಲಿರುತ್ತಿದ್ದನು. ಬಾಲಕಿಯು 2021ನೇ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಆತನ ಮನೆಗೆ ಟಿ.ವಿ. ನೋಡಲು ತೆರಳಿದ್ದಾಗ ಅಂಗಡಿಗೆ ಹೋಗಿ ಬರೋಣವೆಂದು ಹೇಳಿ, ಅಂಗಡಿಗೆ ಕರೆದುಕೊಂಡು ಹೋಗದೆ ಮನೆಯಿಂದ ಸ್ವಲ್ಪ ದೂರದಲ್ಲಿರುವ ಸುಧೀರ್‌ನ ಅಜ್ಜಿಯ ಯಾರೂ ವಾಸವಿಲ್ಲದ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದನು.

ಈ ವಿಚಾರವನ್ನು ತಾಯಿಗೆ ಹೇಳುತ್ತೇನೆ ಎಂದು ಬಾಲಕಿ ಹೇಳಿದಾಗ ತಾಯಿಗೆ ಹೇಳಿದರೆ ನೀನೆ ನನ್ನ ಬಳಿ ಬಂದದ್ದು ಎಂದು ಹೇಳಿ ಪೊಲೀಸ್ ದೂರು ನೀಡುತ್ತೇನೆ ಎಂದು ಹೇಳಿ ಹೆದರಿಸಿದ್ದ. ಅನಂತರದ ದಿನಗಳಲ್ಲೂ ಬಾಲಕಿ ಆತನ ಮನೆಗೆ ರಜಾ ದಿನಗಳಲ್ಲಿ ಟಿ.ವಿ. ನೋಡಲು ಹೋದಾಗ ಮನೆಯಲ್ಲಿ ಯಾರೂ ಇಲ್ಲದೆ ಇದ್ದಾಗ ಅತ್ಯಾಚಾರವೆಸಗಿದ್ದ. ಜೊತಗೆ ಆತನ ಅಜ್ಜಿ ಮನೆಯಲ್ಲಿಯೂ ಹಲವಾರು ಬಾರಿ ಅತ್ಯಾಚಾರ ಎಸಗಿದ್ದ. ಬಾಲಕಿಯು 2022 ಆಗಸ್ಟ್ ತಿಂಗಳ ಬಳಿಕ ಗರ್ಭಿಣಿಯಾಗಿದ್ದಳು.

ನಂತರ ಆರೋಪಿ ಮತ್ತು ಇತರರು ಸೇರಿ ಚಿಕ್ಕಮಗಳೂರು ಕಡೆ ಎಲ್ಲಿಯಾದರೂ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸುವುದಾಗಿ ಯೋಜನೆ ರೂಪಿಸಿದ್ದರು. ಮದುವೆ ಆಗಿದ್ದು ಗಂಡ-ಹೆಂಡತಿ ಎಂದು ಆಸ್ಪತ್ರೆಯವರಿಗೆ ನಂಬಿಸಲು ಆಕೆಗೆ ಕಾಲುಂಗುರ, ಬೆಳ್ಳಿಯ ಕರಿಮಣಿ ಸರ ಹಾಕಿಸಿ ಮದುಮಗಳಂತೆ ಅಲಂಕರಿಸಿ ಆತನನೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಾಲಕಿಯ ಮನೆಗೆ ತೆರಳಿ ಆಕೆಯ ತಾಯಿಗೆ ಮದುವೆ ಮತ್ತು ಬರ್ತ್ಡೇಗೆ ಹೋಗಲು ಇದೆ ಎಂದು ಹೇಳಿ ನೊಂದ ಬಾಲಕಿಯನ್ನು ಸುಧೀರ್ ಮತ್ತು ಇತರರು 2022ರ ಡಿ. 17ರಂದು ಚಿಕ್ಕಮಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಯಲ್ಲಿ ಆಕೆ ತನ್ನ ಹೆಂಡತಿ ಎಂದು ವೈದ್ಯರಿಗೆ ತಿಳಿಸಿ ಗರ್ಭಪಾತ ಮಾಡಿಸಿದ್ದ.

ಬಳಿಕ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಆಗಿನ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಸತ್ಯನಾರಾಯಣ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ಚಾರ್ಜ್ ಶೀಟ್ ಅನ್ನು ಕೋರ್ಟ್ ಗೆ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಯ ವಿರುದ್ಧ ಅಪರಾಧ ಸಾಬೀತಾಗಿದೆ. ಈ ಹಿನ್ನೆಲೆ ಅತ್ಯಾಚಾರ ಮಾಡಿದ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ: 376 ಮತ್ತು ಕಲಂ: 6 ಪೊಕ್ಸೊ ಕಾಯ್ದೆಯಂತೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಲಾಗಿದೆ. ಸಾಕ್ಷ್ಯನಾಶ ಮಾಡಿದ ಅಪರಾಧಕ್ಕೆ ಭಾರತೀಯ ದಂಡ ಸಂಹಿತೆಯ ಕಲಂ: 201ರಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ. ದಂಡದ ಹಣವಾದ 50 ಸಾವಿರ ರೂ. ಅನ್ನು ನೊಂದ ಬಾಲಕಿಗೆ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.

ದಂಡ ಪ್ರಕ್ರಿಯೆ ಸಂಹಿತೆಯ ಕಲಂ: 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ 2 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶಿಸಲಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

9 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago