ಮಂಗಳೂರು (Vishwanews24): ಮೂರು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ ಶಶಿಕುಮಾರ್ (29) ಎಂದು ಗುರುತಿಸಲಾಗಿದೆ.
ಆರೋಪಿ ಶಶಿಕುಮಾರ್ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿನ ಫೈನಾನ್ಸ್ನಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದು, ಈತ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕರೇ ಆಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದು, 2017ರ ನವೆಂಬರ್ನಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆ ಬಳಿಕ ಅನೇಕ ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಇನ್ನು ಕೆಲವು ಸಮಯದ ಬಳಿಕ ಆಕೆಗೆ ಆರೋಗ್ಯ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಧಾವಿಸಿದಾಗ ಆಕೆ ಗರ್ಭಿಣಿಯಾಗಿರುವುದನ್ನು ವೈದ್ಯರು ತಿಳಿಸಿದ್ದಾರೆ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು.
ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018ರ ಜೂ.26ರಂದು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಆಗ ಇದ್ದ ಇನ್ಸ್ಪೆಕ್ಟರ್ ರಾಮಚಂದ್ರ ನಾಯ್ಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಸಂತ್ರಸ್ತ ಮಗುವಿನ ಹಾಗೂ ಶಶಿಕುಮಾರ್ನ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿತ್ತು. 13 ಮಂದಿ ಸಾಕ್ಷಿ ಹೇಳಿದ್ದು, 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿತ್ತು. ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.
ಇನ್ನು ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಕಾಪು : ನಿವೃತ್ತ ಸಿ.ಆರ್.ಪಿ.ಎಫ್ ಯೋಧನ ಪತ್ನಿ ವನಜಾಕ್ಷಿ ಅವರಿಗೆ ಸಮ್ಮಾನ, ಗೌರವ ಅರ್ಪಣೆ -Vishwanews24
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…