Featured

ಮಂಗಳೂರು : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ : ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ -Vishwanews24

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಆರ್‌. ಪಲ್ಲವಿ ಅವರು ಆರೋಪಿ ತಪ್ಪಿತಸ್ಥ ಎಂದು ಸಾಬೀತು ಪಡಿಸಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದಾರೆ.

ಅತ್ಯಾಚಾರ ನಡೆಸಿದಕ್ಕಾಗಿ ಐಪಿಸಿ 376 ಹಾಗೂ ಪೋಕ್ಸೋ ಸೆ.6(ಲೈಂಗಿಕ ದೌರ್ಜನ್ಯ) ಅನ್ವಯ ಜೀವಾವಧಿ ಶಿಕ್ಷೆ ಹಾಗೂ 5ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು ದಂಡ ಮೊತ್ತದಲ್ಲಿ 3 ಸಾವಿರವನ್ನು ಸಂತ್ರಸ್ಥ ಬಾಲಕಿಗೆ ನೀಡಬೇಕು ಹಾಗೂ 2 ಸಾವಿರವನ್ನು ಸರಕಾರಕ್ಕೆ ಪಾವತಿ ಮಾಡಬೇಕು. ಅಲ್ಲದೇ ಸಂತ್ರಸ್ಥ ಬಾಲಕಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

ಅಪರಾಧಿ ಕಿಶೋರ್‌ ಭಯ್ಯಾ (36) ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿದ್ದು ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ.

2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್‌ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago