Featured

ಮಂಗಳೂರು : ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಪ್ರಕರಣ : ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ -Vishwanews24

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಆರ್‌. ಪಲ್ಲವಿ ಅವರು ಆರೋಪಿ ತಪ್ಪಿತಸ್ಥ ಎಂದು ಸಾಬೀತು ಪಡಿಸಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದಾರೆ.

ಅತ್ಯಾಚಾರ ನಡೆಸಿದಕ್ಕಾಗಿ ಐಪಿಸಿ 376 ಹಾಗೂ ಪೋಕ್ಸೋ ಸೆ.6(ಲೈಂಗಿಕ ದೌರ್ಜನ್ಯ) ಅನ್ವಯ ಜೀವಾವಧಿ ಶಿಕ್ಷೆ ಹಾಗೂ 5ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು ದಂಡ ಮೊತ್ತದಲ್ಲಿ 3 ಸಾವಿರವನ್ನು ಸಂತ್ರಸ್ಥ ಬಾಲಕಿಗೆ ನೀಡಬೇಕು ಹಾಗೂ 2 ಸಾವಿರವನ್ನು ಸರಕಾರಕ್ಕೆ ಪಾವತಿ ಮಾಡಬೇಕು. ಅಲ್ಲದೇ ಸಂತ್ರಸ್ಥ ಬಾಲಕಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.

ಅಪರಾಧಿ ಕಿಶೋರ್‌ ಭಯ್ಯಾ (36) ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿದ್ದು ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ.

2016ರಲ್ಲಿ ಕಿಶೋರ್‌ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್‌ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago