ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಮಾಡಿದ ಪರಿಣಾಮವಾಗಿ ಆಕೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆಯನ್ನು ನಡೆಸಿದ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಆರ್. ಪಲ್ಲವಿ ಅವರು ಆರೋಪಿ ತಪ್ಪಿತಸ್ಥ ಎಂದು ಸಾಬೀತು ಪಡಿಸಿದ್ದು ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದಾರೆ.
ಅತ್ಯಾಚಾರ ನಡೆಸಿದಕ್ಕಾಗಿ ಐಪಿಸಿ 376 ಹಾಗೂ ಪೋಕ್ಸೋ ಸೆ.6(ಲೈಂಗಿಕ ದೌರ್ಜನ್ಯ) ಅನ್ವಯ ಜೀವಾವಧಿ ಶಿಕ್ಷೆ ಹಾಗೂ 5ಸಾವಿರ ರೂಪಾಯಿ ದಂಡ ವಿಧಿಸಲಾಗಿದ್ದು ದಂಡ ಮೊತ್ತದಲ್ಲಿ 3 ಸಾವಿರವನ್ನು ಸಂತ್ರಸ್ಥ ಬಾಲಕಿಗೆ ನೀಡಬೇಕು ಹಾಗೂ 2 ಸಾವಿರವನ್ನು ಸರಕಾರಕ್ಕೆ ಪಾವತಿ ಮಾಡಬೇಕು. ಅಲ್ಲದೇ ಸಂತ್ರಸ್ಥ ಬಾಲಕಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕವೂ ಸರಕಾರದಿಂದ ಪರಿಹಾರ ಪಡೆಯಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಸಿ. ವೆಂಕಟರಮಣ ಸ್ವಾಮಿ ವಾದಿಸಿದ್ದರು.
ಅಪರಾಧಿ ಕಿಶೋರ್ ಭಯ್ಯಾ (36) ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರದಲ್ಲಿ ವಾಸವಾಗಿದ್ದು ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ.
2016ರಲ್ಲಿ ಕಿಶೋರ್ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…