ಮಂಗಳೂರು: ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ.
ಶಬರಿಮಲೆ ಅಯ್ಯಪ್ಪ ದೇವರ ಸನ್ನಿಧಾನಕ್ಕೆ ತೆರಳಿದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳು ನ. 4 ರಂದು ಪಾದಯಾತ್ರೆ ಶುರು ಮಾಡಿದ್ದರು. ಇವರು ಪಾದಯಾತ್ರೆ ಮಾಡುತ್ತಿದ್ದ ವೇಳೆ ಗೋಕಾಕ್ ತಾಲೂಕಿನ ಗ್ರಾಮವೊಂದರಲ್ಲಿ ಅಪರಿಚಿತ ಶ್ವಾನವೊಂದು ಅವರ ಜೊತೆಗೆ ಹೆಜ್ಜೆ ಹಾಕಿದೆ. ಮೊದಲು ಏನೋ ಸ್ವಲ್ಪ ದೂರ ಬರಬಹುದು ಎಂದು ಅಯ್ಯಪ್ಪ ಮಾಲಾಧಾರಿಗಳು ಅಂದುಕೊಂಡಿದ್ದರು. ಆದರೆ ಇದೀಗ ಅವರೊಂದಿಗೆ ಸುಮಾರು 600 ಕಿಲೋ ಮೀಟರ್ ಕ್ರಮಿಸಿದೆ. ಪ್ರತಿ ದಿನ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಇದೀಗ ಅಚ್ಚರಿ ಮೂಡಿದೆ.
ಹತ್ತು ಮಂದಿ ಮಾಲಾಧಾರಿಗಳ ತಂಡ ಮಂಗಳೂರು ಮೂಲಕ ರಾಜ್ಯದ ಗಡಿದಾಟಿ ಕೇರಳದ ಕಾಸರಗೋಡಿಗೆ ತಲುಪಿದ್ದಾರೆ. ಗುರು ಸ್ವಾಮಿಗಳು ಶ್ವಾನವನ್ನು ಓಡಿಸಿದರು ಸಹ ಅದು ಹೋಗಿಲ್ಲ. ಅದರಿಂದ ತಪ್ಪಿಸಿಕೊಂಡು ಹೋಗುವ ಯಾವ ಪ್ರಯತ್ನವು ಸಫಲವಾಗಿಲ್ಲ. ಅಯ್ಯಪ್ಪ ಮಾಲಾಧಾರಿಗಳು ನಡೆಯುವಾಗ ನಡೆಯುತ್ತದೆ.
ವಿಶ್ರಾಂತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅದೂ ವಿಶ್ರಾಂತಿ ತೆಗೆದುಕೊಳ್ಳುತ್ತದೆ. ಅಯ್ಯಪ್ಪ ಸ್ವಾಮಿಗಳು ಪ್ರಯಾಣ ಮುಂದುವರಿಸಿದಾಗ ಅದೂ ಹಿಂಬಾಲಿಸುತ್ತದೆ ಎಂದು ಅಯ್ಯಪ್ಪ ಮಾಲಾಧಾರಿಗಳು ತಿಳಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…