ಮಂಗಳೂರು: ಪಾದಯಾತ್ರೆ ನಡೆಸುತ್ತಿದ್ದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಜೊತೆಗೆ ಅಪರಿಚಿತ ಶ್ವಾನವೊಂದು ಸುಮಾರು 600ಕಿ.ಮೀ ಹೆಜ್ಜೆ ಹಾಕಿದ ಘಟನೆ ಎಲ್ಲರಲ್ಲೂ ಅಚ್ಚರಿ ಮೂಡಿದೆ.
ಶಬರಿಮಲೆ ಅಯ್ಯಪ್ಪ ದೇವರ ಸನ್ನಿಧಾನಕ್ಕೆ ತೆರಳಿದ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳು ನ. 4 ರಂದು ಪಾದಯಾತ್ರೆ ಶುರು ಮಾಡಿದ್ದರು. ಇವರು ಪಾದಯಾತ್ರೆ ಮಾಡುತ್ತಿದ್ದ ವೇಳೆ ಗೋಕಾಕ್ ತಾಲೂಕಿನ ಗ್ರಾಮವೊಂದರಲ್ಲಿ ಅಪರಿಚಿತ ಶ್ವಾನವೊಂದು ಅವರ ಜೊತೆಗೆ ಹೆಜ್ಜೆ ಹಾಕಿದೆ. ಮೊದಲು ಏನೋ ಸ್ವಲ್ಪ ದೂರ ಬರಬಹುದು ಎಂದು ಅಯ್ಯಪ್ಪ ಮಾಲಾಧಾರಿಗಳು ಅಂದುಕೊಂಡಿದ್ದರು. ಆದರೆ ಇದೀಗ ಅವರೊಂದಿಗೆ ಸುಮಾರು 600 ಕಿಲೋ ಮೀಟರ್ ಕ್ರಮಿಸಿದೆ. ಪ್ರತಿ ದಿನ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಇದೀಗ ಅಚ್ಚರಿ ಮೂಡಿದೆ.
ಹತ್ತು ಮಂದಿ ಮಾಲಾಧಾರಿಗಳ ತಂಡ ಮಂಗಳೂರು ಮೂಲಕ ರಾಜ್ಯದ ಗಡಿದಾಟಿ ಕೇರಳದ ಕಾಸರಗೋಡಿಗೆ ತಲುಪಿದ್ದಾರೆ. ಗುರು ಸ್ವಾಮಿಗಳು ಶ್ವಾನವನ್ನು ಓಡಿಸಿದರು ಸಹ ಅದು ಹೋಗಿಲ್ಲ. ಅದರಿಂದ ತಪ್ಪಿಸಿಕೊಂಡು ಹೋಗುವ ಯಾವ ಪ್ರಯತ್ನವು ಸಫಲವಾಗಿಲ್ಲ. ಅಯ್ಯಪ್ಪ ಮಾಲಾಧಾರಿಗಳು ನಡೆಯುವಾಗ ನಡೆಯುತ್ತದೆ.
ವಿಶ್ರಾಂತಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಅದೂ ವಿಶ್ರಾಂತಿ ತೆಗೆದುಕೊಳ್ಳುತ್ತದೆ. ಅಯ್ಯಪ್ಪ ಸ್ವಾಮಿಗಳು ಪ್ರಯಾಣ ಮುಂದುವರಿಸಿದಾಗ ಅದೂ ಹಿಂಬಾಲಿಸುತ್ತದೆ ಎಂದು ಅಯ್ಯಪ್ಪ ಮಾಲಾಧಾರಿಗಳು ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…