Featured

ಮಂಗಳೂರು: ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ – Vishwanews24

ಮಂಗಳೂರು: ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ರಾಜೇಂದ್ರ ಸೂಚನೆ – Vishwanews24

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಹಬದಿಗೆ ಬಂದಿದೆ, ಆದರೆ, ಸಂಪೂರ್ಣವಾಗಿ ಹೋಗಿಲ್ಲ. ಈ ಅಂಶವನ್ನು ಪರಿಗಣನೆಗೆ ತೆಗೆದುಕೊಂಡು ಮುಂಬರುವ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನವೆಂಬರ್ 1ರ ಕನ್ನಡ ರಾಜ್ಯೋತ್ಸವ ನಿಮಿತ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡುವರು.

ಈ ಸಂದರ್ಭದಲ್ಲಿ ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಶಿಕ್ಷಕ ವೃಂದ ಉತ್ತಮವಾಗಿ ತಾಲೀಮು ನಡೆಸಿರಬೇಕು, ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಜವಬ್ದಾರಿ ವಹಿಸಬೇಕು, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆಯಿಂದ ಕ್ರೀಡಾಂಗಣವನ್ನು ಸ್ವಚ್ಛ ಪಡಿಸುವ ಹಾಗೂ ಸಮತಟ್ಟು ಮಾಡುವ ಕೆಲಸವಾಗಬೇಕು, ಮಳೆಬರುವ ಸಾಧ್ಯತೆಗಳಿರುವುದರಿಂದ, ಗಣ್ಯರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಮಳೆಗೆ ಸಿಲುಕದಂತೆ ಉತ್ತಮ ಪೆಂಡಾಲ್‍ಗಳನ್ನು ಹಾಕಬೇಕು, ಅದರೊಂದಿಗೆ ಕನ್ನಡ ರಾಜ್ಯೋತ್ಸವ ಆಚರಣೆಗೆ ವಿವಿಧ ಇಲಾಖೆಗಳು ನಿರ್ವಹಿಸಬೇಕಾದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ಮಾಡುವ ಬಗ್ಗೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಅವರು ನಿರ್ದೇಶನ ನೀಡಿದರು.

ಡಿಸಿಪಿ ಹರಿರಾಮ್ ಶಂಕರ್, ಪೆÇ್ರಬೆಷನರಿ ಐಎಎಸ್ ಅಧಿಕಾರಿ ಅಕ್ರಮ್ ಶಾ, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago