ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೋರ್ವರು ಸಮುದ್ರದ ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ನಡೆದಿದ್ದು, ವ್ಯಕ್ತಿ ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ನಿವಾಸಿ ನಾಗರಾಜ (34) ನಾಪತ್ತೆಯಾದವರು. ನಾಗರಾಜ ಅವರು ಅಕ್ಟೋಬರ್ 5ರಂದು ಮಂಗಳೂರು ಬಂದರಿನಿಂದ 8 ಜನರ ತಂಡದೊಂದಿಗೆ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅಕ್ಟೋಬರ್ 8ರ ಬೆಳಗ್ಗೆ 7.30ಕ್ಕೆ ಅರಬೀ ಸಮುದ್ರದ 92 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಸಮುದ್ರದ ಅಲೆಗಳ ತೀವ್ರತೆಯಿಂದ ಆಯ ತಪ್ಪಿ ಬೋಟ್ನಿಂದ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದಾರೆ. ಮೀನುಗಾರ ಕಾಣೆಯಾಗಿರುವ ಬಗ್ಗೆ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು:ತುಳು ಭಾಷೆಯ ಸರ್ವತೋಮುಖ ಅಭಿವೃದ್ದಿಗೆ ಸದಾ ಸಿದ್ದ: ವೇದವ್ಯಾಸ್ ಕಾಮತ್ – vishwanews24
ನಾಗರಾಜ ಅವರು 5.5 ಅಡಿ ಎತ್ತರವಿದ್ದು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ, ಧೃಡಕಾಯ ಶರೀರ ಹೊಂದಿದ್ದಾರೆ. ಹಳದಿ ಬಣ್ಣದ ಟಿ ಶರ್ಟ್ ಮತ್ತು ನೀಲಿ ಬಣ್ಣದ ಬರ್ಮುಡಾ ಚಡ್ಡಿ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ 9480800574, 7019531957 ಅಥವಾ ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಯವರು ಮನವಿ ಮಾಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…