ಮಂಗಳೂರು: ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾದರು.
ಅವರು ಸೆ.5ರ ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.
ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು.
ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು.
ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…