ಮಂಗಳೂರು: ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ದಿಢೀರ್ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾ ಮಂಡಲವಾದರು.
ಅವರು ಸೆ.5ರ ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.
ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು.
ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು.
ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…