Featured

ಮಂಗಳೂರು ಅಶ್ರಫ್‌ ಗುಂಪು ಹತ್ಯೆ ಪ್ರಕರಣ: ನಿಷ್ಪಕ್ಷ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಸಹೋದರನಿಂದ ಉಸ್ತುವಾರಿ ಸಚಿವರಿಗೆ ಮನವಿ – vishwanews24

ಮಂಗಳೂರು ಅಶ್ರಫ್‌ ಗುಂಪು ಹತ್ಯೆ ಪ್ರಕರಣ: ನಿಷ್ಪಕ್ಷ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಸಹೋದರನಿಂದ ಉಸ್ತುವಾರಿ ಸಚಿವರಿಗೆ ಮನವಿ

ಮಂಗಳೂರು : ಕುಡುಪುವಿನಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆ ನಡೆದ ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ಅಶ್ರಫ್‌ ಗುಂಪು ಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಅಶ್ರಫ್‌ ಸಹೋದರ ಜಬ್ಬಾರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.

ʼಎಪ್ರಿಲ್‌ 27ರಂದು ನನ್ನ ಸಹೋದರ ಅಶ್ರಫ್ ಮಂಗಳೂರಿನ ಕುಡುಪು ಬಳಿ ಹತ್ಯೆಗೀಡಾಗಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ತನಿಖಾ ಪ್ರಕ್ರಿಯೆಯಲ್ಲಿ ಹಲವಾರು ಲೋಪಗಳು ಕಂಡು ಬಂದಿದೆ. ಅದರ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಯಾಗಿದೆ. FIR ದಾಖಲಿಸುವುದರಲ್ಲಿ ಮತ್ತು ಪ್ರಕರಣದ ತನಿಖೆಯಲ್ಲಿ ಪೊಲೀಸರು ಪಾಲಿಸಬೇಕಿದ್ದ ಕೆಲವು ಪ್ರಕ್ರಿಯೆಯಲ್ಲಿ ಲೋಪಗಳು ಉಂಟಾಗಿರುವ ಕಾರಣಕ್ಕೆ ತನಿಖಾಧಿಕಾರಿಯೂ ಸೇರಿದಂತೆ ಇಬ್ಬರು ಪೇದೆಗಳನ್ನು ಈಗಾಗಲೇ ಇಲಾಖೆಯು ಅಮನಾತುಗೊಳಿಸಿದೆಯಾದರೂ, ಅವರ ಬದಲಿಗೆ ತನಿಖಾಧಿಕಾರಿಯನ್ನು ಈವರೆಗೆ ನೇಮಿಸಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ದಕ್ಷ ಪೊಲೀಸ್ ಅಧಿಕಾರಿಯೊಬ್ಬರನ್ನು ತಕ್ಷಣ ನೇಮಿಸಬೇಕು. ನಮಗೆ ನ್ಯಾಯವನ್ನು ದೊರಕಿಸಿಕೊಡಬೇಕುʼ ಎಂದು ಅಶ್ರಫ್‌ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಗುಂಪು ಹತ್ಯೆ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬದವರಿಗೆ ಕಾನೂನಾತ್ಮಕವಾಗಿ ನೀಡಬೇಕಿರುವ ಪರಿಹಾರವನ್ನು ತಕ್ಷಣ ಘೋಷಿಸಬೇಕು. ತೆಹಸೀನ್ ಪೂನಾವಾಲ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ ಅನ್ವಯ ಗುಂಪು ಹತ್ಯೆ ಪ್ರಕರಣಗಳನ್ನು Fast Track (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಬೇಕಿರುವ ಕಾರಣ ಸದರಿ ಪ್ರಕರಣವನ್ನು Fast Track ನ್ಯಾಯಲಯಕ್ಕೆ ಒಪ್ಪಿಸಬೇಕು. ಭಾರತೀಯ ನ್ಯಾಯ ಸಂಹಿತೆ- 2023 ಜಾರಿಯಾದ ನಂತರ ಗುಂಪು ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಬೆಳಕಿಗೆ ಬಂದಿರುವುದು ಇದೇ ಮೊದಲು. ಈ ಪ್ರಕರಣಕ್ಕೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಅವರನ್ನು ಈ ಕೂಡಲೇ ನೇಮಿಸಬೇಕು. ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ತೆಹಸೀನ್ ಪೂನಾವಾಲ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ್ನು ಚಾಚೂ ತಪ್ಪದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

19 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago