ಮಂಗಳೂರು : ಕುಡುಪುವಿನಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆ ನಡೆದ ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ಅಶ್ರಫ್ ಗುಂಪು ಹತ್ಯೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯವನ್ನು ದೊರಕಿಸಿಕೊಡುವಂತೆ ಅಶ್ರಫ್ ಸಹೋದರ ಜಬ್ಬಾರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದರು.
ʼಎಪ್ರಿಲ್ 27ರಂದು ನನ್ನ ಸಹೋದರ ಅಶ್ರಫ್ ಮಂಗಳೂರಿನ ಕುಡುಪು ಬಳಿ ಹತ್ಯೆಗೀಡಾಗಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ತನಿಖಾ ಪ್ರಕ್ರಿಯೆಯಲ್ಲಿ ಹಲವಾರು ಲೋಪಗಳು ಕಂಡು ಬಂದಿದೆ. ಅದರ ಬಗ್ಗೆ ಮಾಧ್ಯಮಗಳಲ್ಲಿಯೂ ವರದಿಯಾಗಿದೆ. FIR ದಾಖಲಿಸುವುದರಲ್ಲಿ ಮತ್ತು ಪ್ರಕರಣದ ತನಿಖೆಯಲ್ಲಿ ಪೊಲೀಸರು ಪಾಲಿಸಬೇಕಿದ್ದ ಕೆಲವು ಪ್ರಕ್ರಿಯೆಯಲ್ಲಿ ಲೋಪಗಳು ಉಂಟಾಗಿರುವ ಕಾರಣಕ್ಕೆ ತನಿಖಾಧಿಕಾರಿಯೂ ಸೇರಿದಂತೆ ಇಬ್ಬರು ಪೇದೆಗಳನ್ನು ಈಗಾಗಲೇ ಇಲಾಖೆಯು ಅಮನಾತುಗೊಳಿಸಿದೆಯಾದರೂ, ಅವರ ಬದಲಿಗೆ ತನಿಖಾಧಿಕಾರಿಯನ್ನು ಈವರೆಗೆ ನೇಮಿಸಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ದಕ್ಷ ಪೊಲೀಸ್ ಅಧಿಕಾರಿಯೊಬ್ಬರನ್ನು ತಕ್ಷಣ ನೇಮಿಸಬೇಕು. ನಮಗೆ ನ್ಯಾಯವನ್ನು ದೊರಕಿಸಿಕೊಡಬೇಕುʼ ಎಂದು ಅಶ್ರಫ್ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಗುಂಪು ಹತ್ಯೆ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬದವರಿಗೆ ಕಾನೂನಾತ್ಮಕವಾಗಿ ನೀಡಬೇಕಿರುವ ಪರಿಹಾರವನ್ನು ತಕ್ಷಣ ಘೋಷಿಸಬೇಕು. ತೆಹಸೀನ್ ಪೂನಾವಾಲ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ ಅನ್ವಯ ಗುಂಪು ಹತ್ಯೆ ಪ್ರಕರಣಗಳನ್ನು Fast Track (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಬೇಕಿರುವ ಕಾರಣ ಸದರಿ ಪ್ರಕರಣವನ್ನು Fast Track ನ್ಯಾಯಲಯಕ್ಕೆ ಒಪ್ಪಿಸಬೇಕು. ಭಾರತೀಯ ನ್ಯಾಯ ಸಂಹಿತೆ- 2023 ಜಾರಿಯಾದ ನಂತರ ಗುಂಪು ಹತ್ಯೆ ಪ್ರಕರಣ ಕರ್ನಾಟಕದಲ್ಲಿ ಬೆಳಕಿಗೆ ಬಂದಿರುವುದು ಇದೇ ಮೊದಲು. ಈ ಪ್ರಕರಣಕ್ಕೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಅವರನ್ನು ಈ ಕೂಡಲೇ ನೇಮಿಸಬೇಕು. ಇಂತಹ ಪ್ರಕರಣಗಳು ಮತ್ತೆ ಮರುಕಳಿಸದಂತೆ ತೆಹಸೀನ್ ಪೂನಾವಾಲ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪಿನ್ನು ಚಾಚೂ ತಪ್ಪದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]