ಮಂಗಳೂರು : ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಪರಾಹ್ನ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದು ರಾತ್ರಿ ಮಂಗಳೂರಿನಲ್ಲಿ ಭರ್ಜರಿ ರೋಡ್ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದರು.
ಲೇಡಿ ಹಿಲ್ ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ತೆರೆದ ವಾಹನದಲ್ಲಿ ಸುಮಾರು 2 ಕಿ.ಮೀ. ರೋಡ್ಶೋ ನಡೆಸಿದರು. ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ, ಮಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 1,500 ಕ್ಕೂ ಅಧಿಕ ಪೊಲೀಸರು ರೋಡ್ ಶೋಗೆ ಬಿಗಿ ಭದ್ರತೆ ಒದಗಿಸಿದ್ದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮೂಲೆ ಮೂಲೆಗಳಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿಯನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಂಡರು. ಮೋದಿ ಮುಖವಾಡ, ಧ್ವಜ, ಕೇಸರಿ ಟೋಪಿ ಧರಿಸಿಕೊಂಡು ಮೋದಿ ಪರ ಜೈ ಕಾರದ ಘೋಷಣೆ ಮುಗಿಲು ಮುಟ್ಟಿತ್ತು. ಕರಾವಳಿಯ ಜನಪದ ನೃತ್ಯ, ಹುಲಿ ಕುಣಿತ ರೋಡ್ ಶೋ ಮೆರುಗನ್ನು ಹೆಚ್ಚಿಸಿತ್ತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರಧಾನಿ ಮೋದಿಗೆ ಸಾಥ್ ನೀಡಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…