ಮಂಗಳೂರು : ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಪರಾಹ್ನ ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿದ್ದು ರಾತ್ರಿ ಮಂಗಳೂರಿನಲ್ಲಿ ಭರ್ಜರಿ ರೋಡ್ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದರು.
ಲೇಡಿ ಹಿಲ್ ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ತೆರೆದ ವಾಹನದಲ್ಲಿ ಸುಮಾರು 2 ಕಿ.ಮೀ. ರೋಡ್ಶೋ ನಡೆಸಿದರು. ಎಡಿಜಿಪಿ ಚಂದ್ರಶೇಖರ್, ಐಜಿಪಿ ಬೋರಲಿಂಗಯ್ಯ, ಮಂಗಳೂರು ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 1,500 ಕ್ಕೂ ಅಧಿಕ ಪೊಲೀಸರು ರೋಡ್ ಶೋಗೆ ಬಿಗಿ ಭದ್ರತೆ ಒದಗಿಸಿದ್ದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮೂಲೆ ಮೂಲೆಗಳಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರಧಾನಿ ಮೋದಿಯನ್ನು ಹತ್ತಿರದಿಂದ ನೋಡಿ ಕಣ್ತುಂಬಿಕೊಂಡರು. ಮೋದಿ ಮುಖವಾಡ, ಧ್ವಜ, ಕೇಸರಿ ಟೋಪಿ ಧರಿಸಿಕೊಂಡು ಮೋದಿ ಪರ ಜೈ ಕಾರದ ಘೋಷಣೆ ಮುಗಿಲು ಮುಟ್ಟಿತ್ತು. ಕರಾವಳಿಯ ಜನಪದ ನೃತ್ಯ, ಹುಲಿ ಕುಣಿತ ರೋಡ್ ಶೋ ಮೆರುಗನ್ನು ಹೆಚ್ಚಿಸಿತ್ತು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪ್ರಧಾನಿ ಮೋದಿಗೆ ಸಾಥ್ ನೀಡಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…