Featured

ಮಂಗಳೂರು : ಅ.22 ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ – vishwanews24

ಮಂಗಳೂರು : ಅ.22 ರಂದು ಕಪಿಲಾ ಗೋ ಶಾಲೆಯಲ್ಲಿ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ

ಮಂಗಳೂರು: ಪ್ರಕೃತಿ- ಪಶು ಸಂರಕ್ಷಣೆ, ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಹಾಗೂ ಗೋವಿನ ಪಾವಿತ್ರೃತೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಆರಂಭಗೊಂಡ ಕೆಂಜಾರಿನ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ಅ.22ರಂದು ಬೆಳಗ್ಗೆ 6ರಿಂದ 11.30ರ ವರೆಗೆ 108 ಕಪಿಲಾ ಗೋವಿಗೆ ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಕಪಿಲಾ ಗೋ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿ ಹೇಳಿದರು.

ದೀಪಾವಳಿಯ ವಿಶೇಷ ಸಂದರ್ಭ ಸಾರ್ವಜನಿಕರಿಗೆ ಗೋವಿನ ಅನುಗ್ರಹ ಪ್ರಾಪ್ತಿಗಾಗಿ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ನಡೆಯಲಿರುವ 108 ಕಪಿಲಾ ಗೋಪುಜಾ ಕಾರ್ಯಕ್ರಮದ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಪೂಜ್ಯನೀಯ ಗೋವಿನ ಸಂತತಿ ರಕ್ಷಣೆಗಾಗಿ 2012ರಲ್ಲಿ ಸ್ಥಾಪಿಸಲಾಗಿದ್ದು, 2ಗೋವುಗಳಿಂದ ಆರಂಭವಾದ ಈ ಕಪಿಲಾ ಗೋ ಶಾಲೆ ಇಂದು 600ಕ್ಕೂ ಅಧಿಕ ಗೋವಿಗಳು ಇಲ್ಲಿ ಪಾಲನೆಯಾಗುತ್ತಿದೆ. ಕಪಿಲಾ ಗೋ ಶಾಲೆಯನ್ನು ಅಳಿವಿನಂಚಿನ ದೇಸಿ ಗೋವು ಸಂತತಿ ರಕ್ಷಣೆ ಉದ್ದೇಶದಿಂದ ಮಾತ್ರ ಮುನ್ನಡೆಸಲಾಗುತ್ತಿದ್ದು, ಯಾವುದೇ ಗೋವು ಸಂಬಂದಿತ ಉದ್ಯಮ ಇಲ್ಲಿ ನಡೆಸಲಾಗುತ್ತಿಲ್ಲ. ದಿನದಿಂದ ದಿನಲ್ಲಿ ಇಲ್ಲಿ ಗೋವುಗಳ ಸಂಖ್ಯೆ ವೃದ್ದಿಯಾಗುತ್ತಿದೆ. ಇಲ್ಲಿನ ಗೋವುಗಳ ಹಾಲನ್ನು ಮಾರಲಾಗುತ್ತಿಲ್ಲ, ಬದಲಾಗಿ ಕರುಗಳಿಗೆ ಉಣಿಸಲಾಗುತ್ತಿರುವುದು ಇಲ್ಲಿನ ವಿಶೇಷ ಎಂದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹಾಗೂ ಉದ್ಯಮಿ ಸುರೇಶ್ ಶೆಟ್ಟಿ ಮಾತನಾಡಿ, ಕಪಿಲಾ ಗೋ ಶಾಲೆಯಲ್ಲಿ ದಿನದಿಂದ ದಿನಲ್ಲೆ ಗೋವುಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಗೋವುಗಳಿಗೆ ನಿರಾಳವಾಗಿ ನಡೆದಾಡಲು ಸ್ಥಳದ ಕೊರತೆ ಇದೆ. ಸುಮಾರು 50ಸಾವಿರ ಚ.ಅಡಿ ವಿಸ್ತೀರ್ಣದ ಗೋ ಸಾಲೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಸುಮಾರು 4 ಕೋ.ರೂ ವೆಚ್ಚದ ಯೋಜನೆಯ ನೀಲನಕಾಶೆ ಸಿದ್ದಪಡಿಸಲಾಗಿದೆ. ದಾನಿಗಳ ಸಹಕಾರದಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ಸುಸಜ್ಜಿತ ಗೋ ಶಾಲೆ ನಿರ್ಮಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕ ಗೋಪೂಜಾ ಕಾರ್ಯಕ್ರಮ ಜತೆಗೆ ಶ್ರೀ ಅಯ್ಯಪ್ಪ ಭಕ್ತವೃಂದ ಆಕಾಶಭವನ ಹಾಗೂ ಶಿವನಗರ ಭಜಕ ವೃಂದ ಶಿವನಗರ ಕಾವೂರು ತಂಡಗಳಿಂದ ಭಜನಾ ಸಂಕೀರ್ತನಾ ಸೇವೆ ನಡೆಯಲಿದೆ ಎಂದರು.

ರಾಜ್ಯದಲ್ಲೇ ಅತೀ ವಿರಳವಾಗಿರುವ ದೇಸಿ ಗೋವು ಸಂತತಿಯಾದ ಕಪಿಲಾ ಗೋತಳಿಯು ಸಧ್ಯಕ್ಕೆ ಕಪಿಲಾ ಗೋ ಶಾಲೆಯಲ್ಲಿ ಅತೀ ಹೆಚ್ಚಾಗಿ ಸಂರಕ್ಷಿಸಲಾಗಿದೆ. ಪೌರಾಣಿಕವಾಗಿ ಅತೀ ಹೆಚ್ಚಿನ ಮಹತ್ವ ಪಡೆದಿರುವ ಈ ಗೋ ತಳಿ ನಶಿಸುವ ಹಂತದಲ್ಲಿರುವುದರಿಂದ ಅತೀ ಹೆಚ್ಚು ಕಪಿಲಾ ಗೋತಳಿ ಸಂರಕ್ಷಣೆ ಮಾಡಲಾಗಿದೆ. ಉತ್ತಮ ಔಷಧೀಯ ಗುಣಗಳಿರುವ ಇದರ ಹಾಲು ಅಂಮೃತಕ್ಕೆ ಸಮ ಎಂದು ವೇದಗಳಲ್ಲಿ ಉಲ್ಲೇಖವಿರುವುದನ್ನೂ ಕಾಣಬಹುದು, ಜತೆಗೆ ವೈಜ್ಞಾನಿಕವಾಗಿಯೂ ಇದು ಸಾಬೀತಾಗಿದೆ ಎಂದು ಕಪಿಲಾ ಗೋ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿ ಹೇಳಿದರು.

ದೀಪಾವಳಿಯ ವಿಶೇಷ ಸಂದರ್ಭ ಸಾರ್ವಜನಿಕರಿಗೆ ಗೋವಿನ ಅನುಗ್ರಹ ಪ್ರಾಪ್ತಿಗಾಗಿ ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ನಡೆಯಲಿರುವ 108 ಕಪಿಲಾ ಗೋಪುಜಾ ಕಾರ್ಯಕ್ರಮದ ಆಮಂತ್ರಣಪತ್ರಿಕೆಯನ್ನು ಬಿಡುಗಡೆಗೊಳಿಸಿ ಪ್ರಕಾಶ್ ಶೆಟ್ಟಿ ಬಿಡುಗಡೆಗೊಳಿಸಿದರು.

ಕಪಿಲಾ ಪಾರ್ಕ್ ಗೋ ಶಾಲೆಯಲ್ಲಿ ನಡೆಯಲಿರುವ 108 ಕಪಿಲಾ ಗೋಪುಜಾ ಕಾರ್ಯಕ್ರಮದ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಲಾಯಿತು. ಜೀರ್ಣೋದ್ದಾರ ಸಮಿತಿ ಸಂಚಾಲಕ ರವಿ ಕಾವೂರ್, ಪ್ರಮುಖರಾದ ಸಂತೋಷ್ ಕಾವೂರು, ಯತೀಶ್ ಕುಮಾರ್ ಉದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago