Featured

ಮಂಗಳೂರು: ಅ. 31ರಂದು ಏರ್ ಪೋರ್ಟ್ ಗೆ KSRTC ಬಸ್ ಸಂಚಾರ ಆರಂಭ –  ಇಲ್ಲಿದೆ ವೇಳಾಪಟ್ಟಿಯ ವಿವರ – Vishwanews24

ಮಂಗಳೂರು: ಅ. 31ರಂದು ಏರ್ ಪೋರ್ಟ್ ಗೆ KSRTC ಬಸ್ ಸಂಚಾರ ಆರಂಭ –  ಇಲ್ಲಿದೆ ವೇಳಾಪಟ್ಟಿಯ ವಿವರ

ಮಂಗಳೂರು:ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದೆ.

ಸೇವೆಗಳನ್ನು ಪರಿಚಯಿಸಲು ಮೈಸೂರಿನಿಂದ ನಾಲ್ಕು ವೋಲ್ವೋ ಬಸ್‌ಗಳನ್ನು ಇಲ್ಲಿಗೆ ತರಲಾಗಿದ್ದು ,ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಆದರೆ ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ. 31ರಿಂದ ಈ ಸೇವೆ ಆರಂಭಗೊಳ್ಳಲಿದೆ.

ಈಗಾಗಲೇ ಬಸ್ ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ದರವನ್ನು ರೂ. 100ಕ್ಕೆ ನಿಗದಿಪಡಿಸಲಾಗಿದೆ.

ಮಂಗಳೂರು: ಫಾಝಿಲ್ ಕೊಲೆ ಪ್ರಕರಣ ; ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್ – Vishwanews24

ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ.

ಮಣಿಪಾಲದಿಂದ ಎಂಐಎಗೆ ಪ್ರಯಾಣಿಸಲು ರೂ. 300 ದರ ನಿಗದಿಪಡಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಲ್ಲದೆ, ಇತರರು ಸಹ ಸೌಲಭ್ಯವನ್ನು ಬಳಸಿಕೊಳ್ಳಬಹುದು.

ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್‌ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ಮೊಟಕುಗೊಂಡಿತ್ತು. ಈಗ ಮತ್ತೆ ಈ ದಾರಿಯಲ್ಲಿ 2 ಟ್ರಿಪ್‌ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್‌ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲದಿಂದ ಮಂಗಳೂರಿಗೆ ಒಂದು ಟ್ರಿಪ್‌ ನಡೆಸಲಿದೆ ಟಿಕೆಟ್‌ ದರ 150 ರೂ. ನಿಗದಿಪಡಿಸಲಾಗಿದೆ.

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣ..ಆರೋಪಿ ಕೆ.ಆರ್. ಶೆಟ್ಟಿಗೆ ಜಾಮೀನು ನಿರಾಕರಿಸಿದ ಕೋರ್ಟ್ – Vishwanews24

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago