ಮಂಗಳೂರು:ಮಂಗಳೂರು ಮತ್ತು ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಅ. 31ರಂದು ಆರಂಭಗೊಳ್ಳಲಿದೆ.
ಸೇವೆಗಳನ್ನು ಪರಿಚಯಿಸಲು ಮೈಸೂರಿನಿಂದ ನಾಲ್ಕು ವೋಲ್ವೋ ಬಸ್ಗಳನ್ನು ಇಲ್ಲಿಗೆ ತರಲಾಗಿದ್ದು ,ನಿಗದಿಯಂತೆ ಅ. 27ರಂದು ಸಂಚಾರ ಆರಂಭಗೊಳ್ಳಬೇಕಿತ್ತು. ಆದರೆ ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ. 31ರಿಂದ ಈ ಸೇವೆ ಆರಂಭಗೊಳ್ಳಲಿದೆ.
ಈಗಾಗಲೇ ಬಸ್ ತಾತ್ಕಾಲಿಕ ವೇಳಾಪಟ್ಟಿ ತಯಾರಿಸಲಾಗಿದೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ. ದರವನ್ನು ರೂ. 100ಕ್ಕೆ ನಿಗದಿಪಡಿಸಲಾಗಿದೆ.
ಮಂಗಳೂರು: ಫಾಝಿಲ್ ಕೊಲೆ ಪ್ರಕರಣ ; ಆರೋಪಿಗೆ ಜಾಮೀನು ನಿರಾಕರಿಸಿದ ಕೋರ್ಟ್ – Vishwanews24
ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಹೊರಡಲಿದೆ. ಜ್ಯೋತಿ, ಲಾಲ್ಬಾಗ್, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ.
ಮಣಿಪಾಲದಿಂದ ಎಂಐಎಗೆ ಪ್ರಯಾಣಿಸಲು ರೂ. 300 ದರ ನಿಗದಿಪಡಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರಲ್ಲದೆ, ಇತರರು ಸಹ ಸೌಲಭ್ಯವನ್ನು ಬಳಸಿಕೊಳ್ಳಬಹುದು.
ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ಮೊಟಕುಗೊಂಡಿತ್ತು. ಈಗ ಮತ್ತೆ ಈ ದಾರಿಯಲ್ಲಿ 2 ಟ್ರಿಪ್ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲದಿಂದ ಮಂಗಳೂರಿಗೆ ಒಂದು ಟ್ರಿಪ್ ನಡೆಸಲಿದೆ ಟಿಕೆಟ್ ದರ 150 ರೂ. ನಿಗದಿಪಡಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…