ಉಳ್ಳಾಲ: ಆಂಬ್ಯುಲೆನ್ಸ್ ವಾಹನಕ್ಕೆ ಅಡ್ಡಿಪಡಿಸಿದ ವಾಹನದ ವೀಡಿಯೋ ವೈರಲ್ ಆಗಿದ್ದು, ಅದರಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಿ, ಕಾರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಕೋಟೆಕಾರು ನಿವಾಸಿ ಚರಣ್ ರಾಜ್ (28 ವ) ಬಂಧಿತ. ಜು.19 ರ ಸಂಜೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿ ಇದ್ದ ರೋಗಿಯನ್ನು ಅಂಬುಲೆನ್ಸ್ ಮುಖಾಂತರ ಕೊಂಡೊಯ್ಯಲಾಗುತಿತ್ತು. ಈ ಸಂದರ್ಭ ಇರ್ಟಿಗಾ KA19 MJ 8924 ಕಾರಿನ ಚಾಲಕನು ಬೇಜವಾಬ್ದಾರಿಯಾಗಿ ವರ್ತಿಸಿ ಆಂಬ್ಯುಲೆನ್ಸ್ ಹಾದಿಗೆ ಅಡ್ಡವಾಗಿ ಚಲಿಸುತ್ತಾ ರೋಗಿ ಕೊಂಡೊಯ್ಯಲು ಮತ್ತು ಸಮಯಕ್ಕೆ ಸರಿಯಾಗಿ ತಲುಪಿಸಲು ಅಡ್ಡಿಪಡಿಸಿದ್ದನು.
ಈ ಕುರಿತು ಆಂಬ್ಯುಲೆನ್ಸ್ ಸಿಬ್ಬಂದಿ ಕಾರಿನ ವೀಡಿಯೋ ತೆಗೆದು ವೈರಲ್ ಮಾಡಿದ್ದ. ಅದರಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರನ್ನು ಇಂದು ವಶಕ್ಕೆ ಪಡೆದು ಕೊಂಡಿದ್ದಾರೆ. ಆರೋಪಿ ಕಿವಿಯಲ್ಲಿ ಇಯರ್ ಫೋನ್ ಇಟ್ಟು ಕಾರು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾನೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…