ಮಂಗಳೂರು : ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.
ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮರ ಕುಸಿತದ ಪರಿಣಾಮವಾಗಿ ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ನಡೆದ ತಕ್ಷಣ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…