ಮಂಗಳೂರು : ನಗರದ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಥಳದಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ. ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.
ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದೆ. ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮರ ಕುಸಿತದ ಪರಿಣಾಮವಾಗಿ ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ನಡೆದ ತಕ್ಷಣ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದುಬಂದಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…