ಮಂಗಳೂರು: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ ನಡೆದಿದೆ.
ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆಯು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು, ತಕ್ಷಣ ಸ್ಥಳೀಯರು ಅವರನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಕಾಮಗಾರಿಯ ಹಿನ್ನೆಲೆಯಲ್ಲಿ ಅಗೆಯಲ್ಪಟ್ಟ ಈ ಗುಂಡಿಯನ್ನು ಮುಚ್ಚದೆ ಇದ್ದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.
ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವು ದಿನಗಳಿಂದ ಜನನಿಬಿಡ ಪ್ರದೇಶದಲ್ಲಿ ಗುಂಡಿ ತೋಡಲಾಗಿದ್ದು, ಕಾಮಗಾರಿ ಪೂರ್ತಿಗೊಳಿಸದೆ ಬಿಟ್ಟ ಕಾರಣ ಈ ದುರಂತ ಸಂಭವಿಸಿದೆ. ಹಗಲು ಹೊತ್ತಿನಲ್ಲೇ ಈ ದುರಂತ ನಡೆದಿದ್ದು, ರಾತ್ರಿ ವೇಳೆ ಆಕಸ್ಮಿಕವಾಗಿ ಈ ಗುಂಡಿಗೆ ಬಿದ್ದರೆ ಅಂತಹವರ ಪಾಡೇನು ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿದ್ದು ಎಲ್ಲಿಯೂ ಕೂಡಾ ಸಾರ್ವಜನಿಕರಿಗೆ ಎಚ್ಚರಿಕೆ ಫಲಕಗಳಾಗಲೀ ಕಂಡು ಬರುತ್ತಿಲ್ಲ. ಅಗೆದು ಇಟ್ಟ ಹೊಂಡಗಳನ್ನು ಮುಚ್ಚುತ್ತಿಲ್ಲ. ತಡೆಗೋಡೆಯನ್ನಾಗಲೀ, ಬ್ಯಾರಿಕೇಡ್ಗಳನ್ನಾಗಲೀ ಇಡದಿರುವ ಕಾರಣ ಇಂತಹ ದುರಂತಗಳು ಸಂಭವಿಸಲು ಕಾರಣವಾಗಿದೆ ಎಂದು ಜನತೆ ಆತಂಕ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…