ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿಲಾಗಿದ್ದು ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. ಈ ಬಗ್ಗೆ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ.
1.5 ಕಿ.ಮೀ.ಗೆ ಕನಿಷ್ಠ ದರವನ್ನು 35 ರೂ (ಗರಿಷ್ಠ ಮೂರು ಪ್ರಯಾಣಿಕರು) ನಿಗದಿಪಡಿಸಲಾಗಿದೆ. 1.5 ಕಿಮೀ ನಂತರ ಪ್ರತಿ ಹೆಚ್ಚುವರಿ ಕಿಲೋಮೀಟರ್ಗೆ 20 ರೂ. ಮೊದಲ 15 ನಿಮಿಷಗಳವರೆಗೆ ಕಾಯುವ ಶುಲ್ಕಗಳು ಉಚಿತವಾಗಿರುತ್ತದೆ. ಮುಂದಿನ 15 ನಿಮಿಷಕ್ಕೆ ಐದು ರೂ.ಪಾವತಿಸಬೇಕಿದೆ. ಪ್ರತೀ 20 ಕೆಜಿ ಲಗೇಜ್ ಉಚಿತವಾಗಿರುತ್ತದೆ. ಬಳಿಕದ 10 ಕೆಜಿಗೆ 5 ರೂ. ಪಾವತಿಸಬೇಕಿದೆ.
ರಾತ್ರಿ 10ರಿಂದ ಮುಂಜಾನೆ 5ರವರೆಗೆ ಪರಿಷ್ಕೃತ ದರದ ಒಂದುವರೆ ಪಟ್ಟು ಹೆಚ್ಚು ತೆಗೆದುಕೊಳ್ಳಬಹುದಾಗಿದೆ. ಡಿ.1ರಿಂದ ತಿಂಗಳೊಳಗೆ ಮೀಟರ್ಗಳನ್ನು ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯಿಂದ ಸತ್ಯಾಪನೆ ಮಾಡಿಸಿ ಮುದ್ರೆ ಹಾಕಿಸಿಕೊಳ್ಳಬೇಕು.
ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನ.15ರಂದು ಆಟೋ ರಿಕ್ಷಾ ದರವನ್ನು ಪರಿಷ್ಕರಿಸಿತ್ತು.ಆದರೆ, ಆಟೋ ರಿಕ್ಷಾ ಚಾಲಕರ ಕಮ್ ಮಾಲೀಕರ ಸಂಘವು ಹೆಚ್ಚುವರಿ ಕಿಲೋಮೀಟರ್ ದರ 17 ರೂ.ಗೆ ಒಪ್ಪಿಗೆ ನೀಡಲಿಲ್ಲ. ಆದ್ದರಿಂದ ಹೆಚ್ಚುವರಿ ಕಿಲೋಮೀಟರ್ ದರವನ್ನು 20 ರೂ.ಗೆ ಪರಿಷ್ಕರಿಸಲಾಗಿದೆ.
ಪ್ರತೀ ರಿಕ್ಷಾದಲ್ಲೂ ದರದ ಪಟ್ಟಿಯನ್ನು ಅಳವಡಿಸಬೇಕು. ಪ್ರಯಾಣಿಕರು ಸೂಚಿಸಿದ ಸ್ಥಳಕ್ಕೆ ಹೋಗಲು ಚಾಲಕರು ನಿರಾಕರಿಸಿದಲ್ಲಿ, ಸಾರ್ವಜನಿಕರಲ್ಲಿ ಅನುಚಿತವಾಗಿ ವರ್ತಿಸಿದಲ್ಲಿ ಪೊಲೀಸ್ ಇಲಾಖೆಯು ಕ್ರಮ ಜರಗಿಸಬೇಕು. ಪ್ರಯಾಣಿಕರಿಂದ ಅಧಿಕ ದರ ವಸೂಲಿ ಮಾಡಿದರೆ ದೂ.ಸಂ: 0824-2220577/08251-230729/08255-280504ಕ್ಕೆ ದೂರು ನೀಡಬಹುದು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…